ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಈ ಮೂಲಕ ಆರ್ಥಿಕತೆಯನ್ನು ಬಲಪಡಿಸಬೇಕು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಆಗ್ರಹಿಸಿದ್ದಾರೆ.
'ರಾಜ್ಯಗಳಿಗೆ ಅನುದಾನವನ್ನು ನೀಡುವುದು ಮತ್ತು ಸಹಾಯಕ್ಕೆ ನಿಲ್ಲುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ' ಎಂದು ಅಶೋಕ್ ಗೆಹಲೋತ್ ತಿಳಿಸಿದ್ದಾರೆ.
ರಾಷ್ಟ್ರ ಸಾಗುತ್ತಿರುವ ಪರಿಸ್ಥಿತಿ ಕಳವಳಕಾರಿಯಾಗಿದೆ. ಇಂತಹ ಪರಿಸ್ಥಿತಿಯನ್ನು ಮೊದಲ ಬಾರಿಗೆ ನೋಡುತ್ತಿದ್ದೇನೆ. ಪ್ರಧಾನಿ ಮೋದಿ ಅವರಿಗೆ ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಕಾಲವಿದು. ರಾಜ್ಯಗಳ ಜೊತೆ ಕೆಲಸ ಮಾಡುತ್ತ ಆರ್ಥಿಕತೆಯನ್ನು ಬಲಪಡಿಸಬೇಕು' ಎಂದು ಗೆಹಲೋತ್ ಒತ್ತಿಹೇಳಿದ್ದಾರೆ.