HEALTH TIPS

ರಾಜ್ಯದಲ್ಲಿ ಮುಂದುವರಿದ ಭಾರಿ ಮಳೆ; ಐದು ಅಣೆಕಟ್ಟುಗಳಲ್ಲಿ ರೆಡ್ ಅಲರ್ಟ್


                  ತಿರುವನಂತಪುರಂ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಐದು ಅಣೆಕಟ್ಟುಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
                  ಕಲ್ಲರ್ಕುಟ್ಟಿ, ಪೆÇನ್ಮುಡಿ, ಕುಂಡಾಲ, ಲೋವರ್ ಪೆರಿಯಾರ್ ಮತ್ತು ತನ್ನಯಾರ್ ಅಣೆಕಟ್ಟುಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಅಣೆಕಟ್ಟುಗಳ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಕೊಲ್ಲಂನಿಂದ ವಯನಾಡುವರೆಗಿನ ಜಿಲ್ಲೆಗಳಲ್ಲಿ ಬುಧವಾರದವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
            ಗುರುವಾರ ಎರ್ನಾಕುಳಂನಿಂದ ಕಾಸರಗೋಡುವರೆಗಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿ ಕೇಂದ್ರಗಳನ್ನು ಮುಚ್ಚಲಾಗಿದೆ. ತಿರುವನಂತಪುರ ಜಿಲ್ಲೆಯ ಪೆÇನ್ಮುಡಿ, ಕಲ್ಲಾರ್ ಮತ್ತು ಮಂಗಾಯಂ ಪರಿಸರ ಪ್ರವಾಸೋದ್ಯಮ ಕೇಂದ್ರಗಳಿಗೆ ಪ್ರವೇಶವನ್ನು ನಿμÉೀಧಿಸಲಾಗಿದೆ.
              ಕೊಲ್ಲಂನ ಅಚಾಂಕೋವ್‍ನಲ್ಲಿರುವ ಕುಂಭವರುಟ್ಟಿ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿμÉೀಧಿಸಲಾಗಿದೆ. ತೆಂಗಾಶಿ ಕುಟ್ಟಲಂ ಜಲಪಾತವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪತ್ತನಂತಿಟ್ಟ ಸೀತಾ ಪ್ರದೇಶದಿಂದ ಕೊಚಂಡಿ ಅರಣ್ಯ ಚೆಕ್ ಪೋಸ್ಟ್ ಮೂಲಕ ಗವಿ ಯಾತ್ರೆಗೆ ನಿμÉೀಧ ಹೇರಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries