HEALTH TIPS

ಬೇಕರಿಯಿಂದ ತಂದಿದ್ದ ಹಲ್ವಾ ತಿಂದೊಡನೆ ವ್ಯಕ್ತಿ ದುರಂತ ಸಾವು: ಮರಣೋತ್ತರ ವರದಿಯಲ್ಲಿತ್ತು ಸಾವಿನ ರಹಸ್ಯ!

          ಕೊಚ್ಚಿ: ಬೇಕರಿಯಿಂದ ಕೊಂಡು ತಂದ ಹಲ್ವಾವನ್ನು ತಿನ್ನುವಾಗ ಶ್ವಾಸನಾಳಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಆಘಾತಕಾರಿ ಘಟನೆ ಕೇರಳದಲ್ಲಿ ಶುಕ್ರವಾರ ವರದಿಯಾಗಿದೆ.

           ನಿಜಾರ್​ (49) ಮೃತಪಟ್ಟ ವ್ಯಕ್ತಿ. ಈತ ಕೇರಳದ ಥಾಮರಾ ಮುಕ್ಕುವಿನ ಚೆರುಪುಲ್ಲಿಪರಂಬುವಿನ ನಿವಾಸಿ. ಹಲ್ವಾ ಶ್ವಾಸನಾಳದಲ್ಲಿ ಸಿಲುಕಿಕೊಂಡು ನಿಜಾರ್ ಮನೆಯಲ್ಲೇ​ ದುರಂತ ಸಾವಿಗೀಡಾಗಿದ್ದಾರೆ. ಈ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

                ನಿಜಾರ್ ಕಾರ್ಮಿಕನಾಗಿದ್ದ. ಬುಧವಾರ ಬೆಳಗ್ಗೆ ಆತ ಬೇಕರಿಯಲ್ಲಿ ಹಲ್ವಾ ಕೊಂಡು ತಂದು ಸೇವಿಸಿದ್ದ. ಬಳಿಕ ದೇಹದಲ್ಲಿ ಕೊಂಚ ಇರುಸುಮುರುಸು ಉಂಟಾಗಿ, ಕುಸಿದುಬಿದ್ದಿದ್ದ. ತಕ್ಷಣ ಆತನನ್ನು ಸ್ಥಳೀಯರು ಛಕಲಾ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ​

                  ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಮಂಜಾಳಿ ಜುಮಾ ಮಸೀದಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಶ್ವಾಸನಾಳದಲ್ಲಿ ಹಲ್ವಾ ಸಿಲುಕಿ ಮೃತಪಟ್ಟಿದ್ದಾನೆಂದು ಮರಣೋತ್ತರ ವರದಿಯಲ್ಲಿ ತಿಳಿದುಬಂದಿದೆ. ನಜಾರ್​ ಅವರು ತಮ್ಮ ಪತ್ನಿ ರಮ್ಲಾ ಮತ್ತು ಮಕ್ಕಳಾದ ನಿಲೋಫರ್ ಮತ್ತು ಜೆನ್ನಿಫರ್ ಅವರನ್ನು ಅಗಲಿದ್ದಾರೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries