HEALTH TIPS

ಪ್ರತಿ ವರ್ಷ 5 ಲಕ್ಷ ಅಪಘಾತ, 3 ಲಕ್ಷ ಮಂದಿ ಸಾವಿನಿಂದ ದೇಶದ ಜಿಡಿಪಿಗೆ ನಷ್ಛ; ಹೆದ್ದಾರಿ ಆಡಿಟ್ ನಡೆಸಲು ಗಡ್ಕರಿ ಸೂಚನೆ

 

          ಬೆಂಗಳೂರು: ಪ್ರತಿ ವರ್ಷ 5 ಲಕ್ಷ ಅಪಘಾತಗಳು ವರದಿಯಾಗುತ್ತಿದ್ದು, ಅದರಲ್ಲಿ 3 ಲಕ್ಷ ಮಂದಿ ಸಾವನ್ನಪ್ಪುತ್ತಿರುವುದು ದೇಶದ ಜಿಡಿಪಿಗೆ ಶೇ 3ರಷ್ಟು ನಷ್ಟ ಉಂಟು ಮಾಡುತ್ತಿದೆ. ಹೀಗಾಗಿ ರಾಜ್ಯಗಳು ಹೆದ್ದಾರಿಗಳಲ್ಲಿನ ಅಪಘಾತಗಳ ಲೆಕ್ಕಪರಿಶೋಧನೆ ನಡೆಸುವಂತೆ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೂಚಿಸಿದ್ದಾರೆ.

             ಬೆಂಗಳೂರಿನಲ್ಲಿ ನಡೆದ ಸಾರಿಗೆ ಅಭಿವೃದ್ಧಿ ಮಂಡಳಿಯ 41ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ  ಅವರು, ಲೆಕ್ಕಪರಿಶೋಧನೆ ನಡೆಸಲು ದುಬಾರಿ ವೆಚ್ಚವಾಗಬಹುದು. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಂತ್ರಿಕ ಸಂಸ್ಥೆಗಳಲ್ಲಿನ ಅಧ್ಯಾಪಕರ ಪರಿಣತಿಯನ್ನು ಬಳಸಿಕೊಳ್ಳಬಹುದು. ಹಾಗೂ ಡೇಟಾ ಸಂಗ್ರಹಿಸಲು ವಿದ್ಯಾರ್ಥಿಗಳನ್ನು ಸ್ಟೈಫಂಡ್ ಆಧಾರದ ಮೇಲೆ  ನಿಯೋಜಿಯಿಸಿಕೊಳ್ಳಲು ಸಲಹೆ ನೀಡಿದ್ದಾರೆ. ಈ ರೀತಿಯ ಕ್ರಮ ತೆಗೆದುಕೊಳ್ಳುವುದರಿಂದ  ಅಮೂಲ್ಯ ಜೀವಗಳನ್ನು ಉಳಿಸಲು ಸಹಾಯವಾಗಲಿದೆ ಎಂದರು.

              ಮಾಲಿನ್ಯವನ್ನು ತಡೆಗಟ್ಟಲು  ಹೊಸ ನೀತಿಯನ್ನು ತರಲು, ವಿಶೇಷವಾಗಿ ನಗರಗಳಲ್ಲಿ ವಾಹನ ಚಾಲಕರಿಂದ ಅನಗತ್ಯ ಹಾರ್ನ ನಿಂದಾಗಿ ಅತಿರೇಕವಾಗಿರುವ ಶಬ್ದಮಾಲಿನ್ಯ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ 15 ದಿನಗಳಲ್ಲಿ ಎಲ್ಲಾ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳ ಸಭೆಯನ್ನು ನಡೆಸುವುದಾಗಿ ಗಡ್ಕರಿ ಹೇಳಿದ್ದಾರೆ.

             ಒಂದು ಕೋಟಿ ಜನರು  ಹಲವು ವರ್ಷಗಳ ಕಾಲ ತಮ್ಮ ಕೈಯಿಂದ ಸೈಕಲ್ ರಿಕ್ಷಾಗಳಲ್ಲಿ ಜನರನ್ನು ಸಾಗಿಸುವ ಅಮಾನವೀಯ ವೃತ್ತಿಯಲ್ಲಿ ತೊಡಗಿದ್ದರು. ಅವರಲ್ಲಿ 70 ಲಕ್ಷ ಮಂದಿ ಯಾಂತ್ರೀಕೃತ ಇ-ರಿಕ್ಷಾ ಮತ್ತು ಇ-ಕಾರ್ಟ್‌ಗಳಿಗೆ ಬದಲಾಗಿದ್ದಾರೆ. ಇದು ನನ್ನ ಜೀವನದ ಶ್ರೇಷ್ಠ ಸಾಧನೆಯಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries