HEALTH TIPS

ಅಪಘಾತದಲ್ಲಿ ಸೈರಸ್‌ ಮಿಸ್ತ್ರಿ ಸಾವು: ವೈದ್ಯರ ಮಾಹಿತಿಯಲ್ಲಿ ಏನಿದೆ?

 

              ಮುಂಬೈ: ಕಾರು ಅಪಘಾತದಲ್ಲಿ ಮೃತಪಟ್ಟ, ಟಾಟಾ ಸನ್ಸ್‌ನ ಮಾಜಿ ಚೇರಮನ್ ಸೈರಸ್‌ ಮಿಸ್ತ್ರಿ ಹಾಗೂ ಅವರ ಸ್ನೇಹಿತ ಜಹಾಂಗೀರ್ ಪಾಂಡೋಲೆ ಅವರಿಗೆ ಹಲವು ಗಾಯಗಳಾಗಿದ್ದವು. ಅಲ್ಲದೇ, ಮಿಸ್ತ್ರಿ ಅವರ ಎದೆಗೂಡಿಗೆ ಬಲವಾದ ಪೆಟ್ಟು ಬಿದ್ದಿತ್ತು ಎಂದು ಮುಂಬೈನ ಜೆ.ಜೆ.ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

             'ಅವರ ರಕ್ತನಾಳಗಳು ಛಿದ್ರಗೊಂಡಿದ್ದ ಕಾರಣ, ದೇಹದ ಒಳಗೂ ತೀವ್ರ ರಕ್ತಸ್ರಾವ ಆಗಿತ್ತು' ಎಂದೂ ಅವರು ಹೇಳಿದ್ದಾರೆ.

             ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ, ಅವರಿದ್ದ ಕಾರು ಪಾಲ್ಘರ್ ಜಿಲ್ಲೆಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಮಿಸ್ತ್ರಿ ಹಾಗೂ ಜಹಾಂಗೀರ್‌ ಅವರು ಮೃತಪಟ್ಟಿದ್ದರು.

                   ಕಾರು ಚಲಾಯಿಸುತ್ತಿದ್ದ ವೈದ್ಯೆ ಅನಾಹಿತಾ ಪಾಂಡೋಲೆ ಹಾಗೂ ಪತಿ ಡೇರಿಯಸ್ ಪಾಂಡೋಲೆ ಅವರಿಗೆ ಗಾಯಗಳಾಗಿವೆ. ಅವರನ್ನು ಮುಂಬೈನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇವರಿಗೆ ಮುಂಬೈನ ಸರ್‌ ಎಚ್‌.ಎನ್.ರಿಲಯನ್ಸ್ ಫೌಂಡೇಷನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

               'ಇಬ್ಬರಿಗೂ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚೇತರಿಸಿಕೊಂಡು, ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದ ನಂತರ ಶಸ್ತ್ರಚಿಕಿತ್ಸೆ ನೆರವೇರಿಸುವ ಬಗ್ಗೆ ವೈದ್ಯರ ತಂಡ ನಿರ್ಧಾರ ಕೈಗೊಳ್ಳುವುದು' ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ತಿಳಿಸಿದ್ದಾರೆ.

             ಅನಾಹಿತಾ ಅವರ ಸೊಂಟದ ಮೂಳೆ ಮುರಿದಿದೆ. ಡೇರಿಯಸ್ ಅವರ ದವಡೆ ಮುರಿದಿದ್ದು, ಶ್ವಾಸನಾಳದಲ್ಲಿ ಅಡಚಣೆಯನ್ನುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries