HEALTH TIPS

ಸಾಮಾಜಿಕ ಕಾರ್ಯಕರ್ತೆ ಮೇರಿ ರಾಯ್ ನಿಧನ

 

            ಕೊಟ್ಟಾಯಂ: ಖ್ಯಾತ ಶಿಕ್ಷಣ ತಜ್ಞೆ, ಸಾಮಾಜಿಕ ಕಾರ್ಯಕರ್ತೆ ಮೇರಿ ರಾಯ್ (89) ಅವರು ವಯೋಸಹಜ ಕಾಯಿಲೆಗಳಿಂದ ಗುರುವಾರ ನಿಧನರಾದರು.

      ಅವರಿಗೆ ಮಗಳು, ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ಮತ್ತು ಮಗ ಲಲಿತ್ ರಾಯ್ ಇದ್ದಾರೆ.   ಮೇರಿ ಅವರು ಪಲ್ಲಿಕೂಡಂ ಶಾಲೆಯ ಸ್ಥಾಪಕರೂ ಹೌದು.

              ಕೊಟ್ಟಾಯಂ ಸಮೀಪದ ಐಮನಂ ಗ್ರಾಮದಲ್ಲಿ 1933ರಲ್ಲಿ ಜನಿಸಿದ ಮೇರಿ ಅವರು ದೆಹಲಿಯಲ್ಲಿ ಶಾಲಾ ಶಿಕ್ಷಣ ಹಾಗೂ ಚೆನ್ನೈನಲ್ಲಿ ಕಾಲೇಜು ಪದವಿ ಪಡೆದರು. ಬಳಿಕ ಕೋಲ್ಕತ್ತದ ಕಂಪನಿಯೊಂದರಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾಗ ಅವರು ರಾಜೀಬ್ ರಾಯ್ ಅವರನ್ನು ವಿವಾಹವಾದರು. 

               1980ರಲ್ಲಿ ಕೇರಳದ ಸಿರಿಯನ್ ಕ್ರಿಶ್ಚಿಯನ್ ಕುಟುಂಬಗಳ ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಲಿಂಗ ಸಮಾನತೆಯನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇರಿ ಅವರು ಕಾನೂನು ಹೋರಾಟವನ್ನು ಪ್ರಾರಂಭಿಸಿದರು. 1986ರಲ್ಲಿ ಕೋರ್ಟ್ ಇವರ ಮನವಿಯನ್ನು ಪುರಸ್ಕರಿಸಿತು.

                ತಿರುವಾಂಕೂರು ರಾಜಪ್ರಭುತ್ವದ 1916ರ ತಿರುವಾಂಕೂರ್ ಉತ್ತರಾಧಿಕಾರ ಕಾಯ್ದೆಯಲ್ಲಿನ ನಿಬಂಧನೆಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಮಹಿಳೆಯರಿಗೂ ಅವರ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕುಗಳಿವೆ ಎಂದು ತೀರ್ಪು ನೀಡಿತ್ತು.

                 ಮೇರಿ ಅವರ ಪಾರ್ಥಿವ ಶರೀರವನ್ನು ಪಲ್ಲಿಕೂಡಂ ಕ್ಯಾಂಪಸ್‌ನಲ್ಲಿರುವ ಅವರ ನಿವಾಸದಲ್ಲಿ ಸೆ. 2ರ ಮಧ್ಯಾಹ್ನದ ತನಕ ಸಾರ್ವಜನಿಕ ವೀಕ್ಷಣೆ ಇರಿಸಲಾಗುವುದು. ಬಳಿಕ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries