HEALTH TIPS

ಹಿಮಪಾತಕ್ಕೆ ಸಿಲಿಕಿರುವ 21 ಪವರ್ತರೋಹಿಗಳು; ರಕ್ಷಣೆ ಕಾರ್ಯ ಚುರುಕು

 

             ಡೆಹ್ರಾಡೂನ್‌: ಉತ್ತರಾಖಂಡ್​​ ರಾಜ್ಯದಲ್ಲಿ ಪರ್ವತಾರೋಹಣಕ್ಕೆ ತೆರಳಿದ್ದ 21 ಜನರು ಹಿಮಪಾತಕ್ಕೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.

                  ಇಲ್ಲಿನ ಘರ್ವಾಲ್‌ ಪ್ರದೇಶದಲ್ಲಿರುವ ದ್ರೌಪದಿ ಪವರ್ತದ ದಂಡ-2 ಶಿಖರ ಪ್ರದೇಶದಲ್ಲಿ ಹಿಮಪಾತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

               29 ಜನರು ಪರ್ವತಾರೋಹಣಕ್ಕೆ ತೆರಳಿದ್ದರು. ಇವರ ಪೈಕಿ 21 ಜನರು ಹಿಮಪಾತಕ್ಕೆ ಸಿಲುಕಿದ್ದಾರೆ. 9 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಕ್ಷಣೆ ಕಾರ್ಯಾಚರಣೆ ಮಾಡುತ್ತಿರುವ ಅಧಿಕಾರಿಗಳು ಹೇಳಿದ್ದಾರೆ.

                ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಹಿಮಪಾತವಾಯಿತು ಎಂದು ಪರ್ವತರೋಹಿಯೊಬ್ಬರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣ ತಂಡಗಳು, ಐಟಿಬಿಪಿ ಯೋಧರು, ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಹೋಗಿದ್ದು ರಕ್ಷಣೆ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

                ರಕ್ಷಣೆ ಕಾರ್ಯಕ್ಕೆ ನೆರವು ನೀಡುವಂತೆ ಮುಖ್ಯಮಂತ್ರಿ ದಾಮಿ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಮಾಡಿದ್ದರು. ಈ ಬಗ್ಗೆ ಅವರು ಟ್ವಿಟ್‌ ಮಾಡಿದ್ದಾರೆ.

                    ಪರ್ವತಾರೋಹಣಕ್ಕೆ ತೆರಳಿದವರು ಉತ್ತರ ಕಾಶಿಯ ನೆಹರು ಪರ್ವತಾರೋಹಣ ಸಂಸ್ಥೆಯವರು ಎಂದು ತಿಳಿದು ಬಂದಿದೆ. ಇವರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಉತ್ತರಾಖಂಡ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries