HEALTH TIPS

ನೀರ್ಚಾಲಿನಲ್ಲಿ ಅಕ್ಟೋಬರ್ 21,22ರಂದು ಕುಂಬಳೆ ಉಪಜಿಲ್ಲಾ ಮಟ್ಟದ `ಶಾಸ್ತ್ರೋತ್ಸವ’


            ಬದಿಯಡ್ಕ: ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2022 ಅ. 21 ಶುಕ್ರವಾರ ಮತ್ತು 22 ಶನಿವಾರಗಳಂದು ಕುಂಬಳೆ ಉಪಜಿಲ್ಲಾ ಮಟ್ಟದ `ಶಾಸ್ತ್ರೋತ್ಸವಂ’ ಜರಗಲಿದೆ. ಅಕ್ಟೋಬರ್ 21 ರಂದು ಸಮಾಜ ವಿಜ್ಞಾನ, ಗಣಿತ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸ್ಪರ್ಧೆಗಳು ಮತ್ತು ಅಕ್ಟೋಬರ್ 22 ರಂದು ವಿಜ್ಞಾನ ಮತ್ತು ವೃತ್ತಿಪರಿಚಯಕ್ಕೆ ಸಂಬಂಧಿಸಿದ ಸ್ಪರ್ಧೆಗಳು ಜರಗಲಿವೆ. ಕಾರ್ಯಕ್ರಮದಲ್ಲಿ ಕುಂಬಳೆ ಉಪಜಿಲ್ಲೆಯ ವಿವಿಧ ಸರ್ಕಾರಿ, ಅನುದಾನಿತ ಮತ್ತು ಅನನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸ್ಪರ್ಧೆಗಳು ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಹೈಯರ್ ಸೆಕೆಂಡರಿ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಜರಗಲಿದೆ.
         ಅ.21 ರಂದು ಶುಕ್ರವಾರ ಬೆಳಗ್ಗೆ 9 ಕ್ಕೆ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆಯವರು ಧ್ವಜಾರೋಹಣಗೈಯಲಿದ್ದಾರೆ. ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾಂತಾ ಬಿ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ನೆರವೇರಿಸುವರು.
         ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯೆ ಎಂ.ಶೈಲಜಾ ಭಟ್, ಕಾಸರಗೋಡು ಕಂದಾಯ ಜಿಲ್ಲಾ ಶಿಕ್ಷಣಾಧಿಕಾರಿ ಪುಷ್ಪಾ ಕೆ.ವಿ, ಡಯಟ್ ಕಾಸರಗೋಡಿನ ಪ್ರಾಂಶುಪಾಲ ಕೆ.ರಘುರಾಮ ಭಟ್, ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ಎನ್.ನಂದಿಕೇಶನ್, `ಕೈಟ್’ ಜಿಲ್ಲಾ ವ್ಯವಸ್ಥಾಪಕ ರಾಜೇಶ್ ಎಂ.ಪಿ, ಬದಿಯಡ್ಕ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಅಬ್ಬಾಸ್ ಎಂ, ಬದಿಯಡ್ಕ ಗ್ರಾಮ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ರಶೀದಾ ಹಮೀದ್, ಕಾಸರಗೋಡು ಬ್ಲಾಕ್ ಪಂಚಾಯತಿ ಸದಸ್ಯೆ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತಿ ಸದಸ್ಯೆ ಜಯಶ್ರೀ ಪಿ, ಕುಂಬಳೆ ಬಿಪಿಸಿ ಜಯರಾಮ್ ಜೆ, ಬದಿಯಡ್ಕ ಗ್ರಾಮ ಪಂಚಾಯತಿ ಪಿಇಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ, ಕುಂಬಳೆ ಉಪಜಿಲ್ಲಾ ಏಕ್ಟಿವಿಟಿ ಕಮಿಟಿಯ ಸಂಚಾಲಕ ಸುರೇಂದ್ರನ್ ಎಂ.ವಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ  ಮಾಲತಿ.ವೈ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಎಸ್.ನಾರಾಯಣ ಮತ್ತು ಮೋಹನ್ ಡಿ.ಎನ್ ಕಾರ್ಯಕ್ರಮಕ್ಕೆ ಶುಭಹಾರೈಸಲಿದ್ದಾರೆ. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ,  ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ್ ಎಂ.ಕೆ ನೇತೃತ್ವ ವಹಿಸುವರು.
     22 ರಂದು ಶನಿವಾರ ಅಪರಾಹ್ಣ 3.ಕ್ಕೆ ಜರಗಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ ವಹಿಸುವರು. ಬದಿಯಡ್ಕ ಪೋಲೀಸ್ ಇನ್‍ಸ್ಪೆಕ್ಟರ್ ಅಶ್ವಿತ್ ಎಸ್.ಕರಣ್ಮಯಿಲ್, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಮಾತೃ ವಿಭಾಗದ ಅಧ್ಯಕ್ಷರುಗಳಾದ ಗಿರಿಜಾ ಮತ್ತು ಸಿಂಧು ಟಿ ಬಹುಮಾನಗಳನ್ನು ವಿತರಿಸಲಿದ್ದಾರೆ. ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಪ್ರಭಾರ ಪ್ರಾಂಶುಪಾಲ ಎಂ.ಸುಬ್ರಹ್ಮಣ್ಯನ್, ಕಾರ್ಯಕ್ರಮ ಸಮಿತಿ  ಸಂಚಾಲಕ ಕೆ.ಗೋವಿಂದ ಶರ್ಮ ಉಪಸ್ಥಿತರಿರುವರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries