HEALTH TIPS

ಗೃಹ ಪ್ರವೇಶದ ದಿನ ಹುಂಜ ಬಲಿ ಕೊಡಲು ಮೂರನೇ ಮಹಡಿಗೆ ಹೋದ ವ್ಯಕ್ತಿ ದುರಂತ ಸಾವು!

 

               ಚೆನ್ನೈ: ಹೊಸದಾಗಿ ನಿರ್ಮಾಣ ಮಾಡಿದ ಮನೆಯನ್ನು ಪ್ರವೇಶಿಸುವ ಮುನ್ನ ಯಾವುದೇ ಕೆಟ್ಟ ದೃಷ್ಟಿ ಮನೆಯ ಮೇಲೆ ಬೀಳದಿರಲಿ ಎಂದು ಹುಂಜವನ್ನು ಬಲಿ ಕೊಡಲು ಹೋದ ವ್ಯಕ್ತಿಯೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

                   ಮೃತ ವ್ಯಕ್ತಿಯನ್ನು 70 ವರ್ಷದ ಕಾರ್ಮಿಕ ರಾಜೇಂದ್ರನ್​ ಎಂದು ಗುರುತಿಸಲಾಗಿದೆ.

ಪಲ್ಲವರಂ ಬಳಿಯ ಪೊಜಿಚಲೂರ್ ಪ್ರದೇಶದಲ್ಲಿ ಟಿ. ಲೋಕೇಶ್​ ಎಂಬುವರು ಹೊಸ ಮನೆ ನಿರ್ಮಿಸಿದ್ದು, ಅದರ ಗೃಹ ಪ್ರವೇಶ ಹಿನ್ನೆಲೆಯಲ್ಲಿ ಪೂಜಾ ವಿಧಾನಗಳನ್ನು ನಡೆಸಿಕೊಡಲು ರಾಜೇಂದ್ರನ್​ ಎಂಬುವರನ್ನು ಸಹಾಯಕರನ್ನಾಗಿ ನೇಮಿಸಿಕೊಂಡಿದ್ದರು.

                    ಪೂಜೆ ನೆರವೇರಿಸಿ ರಾಜೇಂದ್ರನ್​ ವಾಪಸ್‌ ಬಾರದೆ ಇದ್ದಾಗ, ಲೋಕೇಶ್‌ ಅವರನ್ನು ಹುಡುಕಿಕೊಂಡು ಹೋದರು. ಈ ವೇಳೆ ಕಟ್ಟಡಕ್ಕೆ ಲಿಫ್ಟ್‌ ಅಳವಡಿಸಲು ತೋಡಿದ್ದ ಗುಂಡಿಯಲ್ಲಿ ರಕ್ತದ ಮಡುವಿನಲ್ಲಿ ರಾಜೇಂದ್ರನ್​ ಬಿದ್ದಿರುವುದನ್ನು ಕಂಡು ದಿಗ್ಭ್ರಾಂತರಾದರು. ಹುಂಜವನ್ನು ಬಲಿ ಕೊಡಲು ಮೂರನೇ ಮಹಡಿಗೆ ಹೋದ ಸಂದರ್ಭದಲ್ಲಿ ಅಲ್ಲಿಂದ ಹಳ್ಳಕ್ಕೆ ಬಿದ್ದು ರಾಜೇಂದ್ರನ್​ ಮೃತಪಟ್ಟಿದ್ದಾರೆ.

                   ಘಟನೆಯಲ್ಲಿ ಹುಂಜ ಬದುಕುಳಿದಿದೆ. ರಾಜೇಂದ್ರನ್​ ಅವರನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಈ ಸಂಬಂಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries