HEALTH TIPS

ಭಾರತದತ್ತ ಕೆಟ್ಟ ದೃಷ್ಟಿ ಬೀರಿದರೆ ತಕ್ಕ ಉತ್ತರ: ರಾಜನಾಥ್‌ ಸಿಂಗ್‌

 

               ನವದೆಹಲಿ: ಭಾರತವು ಯಾವತ್ತೂ ಯಾವುದೇ ದೇಶದ ಜನರಿಗೆ ನೋವುಂಟು ಮಾಡಲು ಪ್ರಯತ್ನಿಸಿಲ್ಲ. ಆದರೆ ದೇಶದ ಮೇಲೆ ಯಾರಾದರೂ ಕೆಟ್ಟ ದೃಷ್ಟಿ ಬೀರಿದರೆ ತಕ್ಕ ಉತ್ತರ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾನುವಾರ ಹೇಳಿದ್ದಾರೆ.

                ವರ್ಚುವಲ್ ಆಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಸವಾಲುಗಳನ್ನು ಎದುರಿಸಲು ದೇಶವು ಸಿದ್ಧವಾಗಿದೆ ಎಂದಿದ್ದಾರೆ.

                    'ಭಾರತವು ಶಾಂತಿಪ್ರಿಯ ದೇಶವಾಗಿದೆ. ಇಲ್ಲಿನ ಶಾಂತಿ ಮತ್ತು ಸಾಮರಸ್ಯವನ್ನು ಕದಡುವ ಪ್ರಯತ್ನ ನಡೆದರೆ, ಸೂಕ್ತ ಉತ್ತರ ನೀಡಲಾಗುವುದು' ಎಂದೂ ಹೇಳಿದ್ದಾರೆ.

                 ಸಶಸ್ತ್ರ ಪಡೆಗಳನ್ನು ಸ್ವದೇಶಿ ನಿರ್ಮಿತ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಬಲಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದೂ ಸಚಿವರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries