HEALTH TIPS

ಸೇತುವೆ ಕುಸಿತದ ಘಟನೆಯಿಂದ ನೋವಾಗಿದೆ, ಕರ್ತವ್ಯದ ಮಾರ್ಗ ಅನುಸರಿಸಬೇಕಾಗಿದೆ: ಪ್ರಧಾನಿ ಮೋದಿ

              ವದೆಹಲಿ :ಗುಜರಾತ್‌ನ ಮೊರ್ಬಿಯಲ್ಲಿ ಬ್ರಿಟಿಷರ ಕಾಲದ ಸೇತುವೆ ಕುಸಿದು ಕನಿಷ್ಠ 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ Prime Minister Narendra Modi ನಿನ್ನೆಯಿಂದ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ.

                   ಕೇಂದ್ರವು ರಾಜ್ಯಕ್ಕೆ ಎಲ್ಲಾ ಸಹಾಯವನ್ನು ನೀಡುತ್ತಿದೆ. ಈ ಘಟನೆಯಿಂದ ನನಗೆ ನೋವಾಗಿದೆ, ಆದರೆ ಕರ್ತವ್ಯದ ಮಾರ್ಗವನ್ನು ಅನುಸರಿಸಬೇಕಾಗಿದೆ ಎಂದಿದ್ದಾರೆ.

                  "ನಾನು ಏಕ್ತಾ ನಗರದಲ್ಲಿದ್ದೇನೆ, ಆದರೆ ನನ್ನ ಮನಸ್ಸು ಮೊರ್ಬಿ ಸಂತ್ರಸ್ತರ ಜೊತೆಗಿದೆ. ಅಪರೂಪವಾಗಿ, ನನ್ನ ಜೀವನದಲ್ಲಿ ನಾನು ಅಂತಹ ನೋವನ್ನು ಅನುಭವಿಸಿದ್ದೇನೆ. ಒಂದು ಕಡೆ ನೋವಿನಿಂದ ಕೂಡಿದ ಹೃದಯವಿದೆ. ಇನ್ನೊಂದು ಕಡೆ, ಕರ್ತವ್ಯದ ಹಾದಿ ಇದೆ " ಎಂದು ಗುಜರಾತ್‌ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದ ನಂತರ ಅವರು ಜನರನ್ನು ಉದ್ದೇಶಿಸಿ ಹೇಳಿದರು.

                "ಸೇತುವೆ ಕುಸಿತ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖದ ಸಮಯದಲ್ಲಿ, ಸರಕಾರವು ಎಲ್ಲಾ ರೀತಿಯಲ್ಲೂ ದುಃಖಿತ ಕುಟುಂಬಗಳೊಂದಿಗೆ ಇದೆ. ಅಪಘಾತದ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ಸಹ ರಚಿಸಲಾಗಿದೆ'' ಎಂದು ಪ್ರಧಾನಿ ಹೇಳಿದರು.

               ಈ ದುರಂತದ ಸಮಯದಲ್ಲಿ ಜನರು ಒಗ್ಗಟ್ಟಿನಿಂದ ಇರಬೇಕೆಂದು ಮನವಿ ಮಾಡಿದ ಅವರು, ಎಲ್ಲಾ ಕಡೆಯಿಂದ ಸವಾಲುಗಳನ್ನು ಎದುರಿಸುತ್ತಿದ್ದರೂ ತಮ್ಮ ಕೆಲಸವನ್ನು ನಿರ್ವಹಿಸಿದ ಸರ್ದಾರ್ ಪಟೇಲ್ ಅವರನ್ನು ನಾವು ಪ್ರೇರಣೆಯಾಗಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries