HEALTH TIPS

ರಾಜಸ್ಥಾನ: ಅಂತಾರಾಷ್ಟ್ರೀಯ ಗಡಿ ದಾಟಲು ಯತ್ನಿಸುತ್ತಿದ್ದ ಪಾಕ್ ನಾಗರಿಕ ಬಿಎಸ್‌ಎಫ್ ಗುಂಡಿಗೆ ಬಲಿ

 

      ಜೈಪುರ: ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಅನುಪ್‌ಗಢ ಸೆಕ್ಟರ್‌ನಲ್ಲಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನದ ನಾಗರಿಕನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

               ಶುಕ್ರವಾರ ರಾತ್ರಿ ಗಡಿ ಭದ್ರತಾ ಪಡೆ ಸಿಬ್ಬಂದಿ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಪಾಕಿಸ್ತಾನಿ ನಾಗರಿಕನೊಬ್ಬ ಭಾರತ ಪ್ರವೇಶಿಸಲು ಯತ್ನಿಸುತ್ತಿರುವುದು ಕಂಡು ಬಂದಿದೆ.

               ಗಡಿ ಪ್ರವೇಶಿಸದಂತೆ ಯೋಧರು ಎಚ್ಚರಿಸಿದರೂ ನಿಲ್ಲಿಸದೆ ಇದ್ದಾಗ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಶ್ರೀಗಂಗಾನಗರ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಶರ್ಮಾ ತಿಳಿಸಿದ್ದಾರೆ. ಈ ಸಂಬಂಧ ಅನುಪ್ ಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ.

             ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ಆತನ ಬಳಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries