HEALTH TIPS

ಜಾರ್ಖಂಡ್‌ನಲ್ಲಿ ಐಟಿ ದಾಳಿ: ₹100 ಕೋಟಿ ದಾಖಲೆಯಿಲ್ಲದ ವಹಿವಾಟು ಪತ್ತೆ

 

         ನವದೆಹಲಿ: ಜಾರ್ಖಂಡ್‌ನಲ್ಲಿ ಆದಾಯ ತೆರಿಗೆ ಇಲಾಖೆ ಮಂಗಳವಾರವೂ ದಾಳಿ ಮುಂದುವರಿಸಿದ್ದು, ₹2 ಕೋಟಿ ನಗದು ವಶಕ್ಕೆ ಪಡೆದಿದೆ. ₹100 ಕೋಟಿಗೂ ಅಧಿಕ ಮೊತ್ತದ ದಾಖಲೆಯಿಲ್ಲದ ವಹಿವಾಟು ಮತ್ತು ಹೂಡಿಕೆ ಪತ್ತೆಯಾಗಿರುವುದಾಗಿ ಇಲಾಖೆ ಹೇಳಿದೆ.

ಇಬ್ಬರು ಕಾಂಗ್ರೆಸ್‌ ಶಾಸಕರು ಮತ್ತು ಕೆಲ ವರ್ತಕರಿಗೆ ಸಂಬಂಧಿತ ಉದ್ಯಮಗಳ ಮೇಲೆ ಕೇಂದ್ರದ ನೇರ ತೆರಿಗೆ ಇಲಾಖೆ ಸೋಮವಾರ ದಾಳಿ ನಡೆಸಿತ್ತು. ಈ ಸಮೂಹಗಳು ನಾನಾ ರೀತಿಯಲ್ಲಿ ತೆರಿಗೆ ವಂಚನೆಯಲ್ಲಿ ತೊಡಗಿಕೊಂಡಿವೆ ಎಂದು ಆರೋಪಿಸಿತ್ತು.

             ಕಲ್ಲಿದ್ದಲು ವಹಿವಾಟು, ಸಾರಿಗೆ, ಸರ್ಕಾರಿ ಗುತ್ತಿಗೆ, ಉಕ್ಕು ಸಂಬಂಧಿತ ಉದ್ಯಮ ಹಾಗೂ ಇಬ್ಬರು ರಾಜಕೀಯ ನಾಯಕರು ಮತ್ತು ಅವರ ಸಹವರ್ತಿಗಳಿಗೆ ಸಂಬಂಧಿತ ಉದ್ಯಮಗಳ ಮೇಲೆ ದಾಳಿ ನಡೆದಿದೆ. ಶೋಧ ಕಾರ್ಯಾಚರಣೆಯಿಂದ ಕೆಲ ದಾಖಲೆಗಳು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತೆರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ.

                ಈ ಪುರಾವೆಗಳ ಪ್ರಾಥಮಿಕ ವಿಶ್ಲೇಷಣೆಯಿಂದ ಈ ಸಮೂಹಗಳು ತೆರಿಗೆ ವಂಚನೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ನಗದು ರೂಪದಲ್ಲಿ, ಸಾಲ ವಹಿವಾಟುಗಳು, ಪಾವತಿಗಳು / ರಶೀದಿಗಳು ಮತ್ತು ಉತ್ಪಾದನೆ ಸುಳ್ಳು ಲೆಕ್ಕ ಸೇರಿದಂತೆ ತೆರಿಗೆ ವಂಚನೆಯ ವಿವಿಧ ವಿಧಾನಗಳನ್ನು ಆಶ್ರಯಿಸಿವೆ ಎಂದು ತಿಳಿಸಿದೆ.

                ಕಾಂಗ್ರೆಸ್‌ ಶಾಸಕರಾದ ಜೈಮಂಗಲ್‌ ಸಿಂಗ್‌ ಮತ್ತು ಪ್ರದೀಪ್‌ ಯಾದವ್‌ ಅವರಿಗೆ ಸಂಬಂಧಿಸಿದ ಉದ್ಯಮಗಳ ಮೇಲೆ ದಾಳಿ ನಡೆದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ. ಶಾಸಕ ಜೈಮಂಗಲ್‌ ಸಿಂಗ್‌ ಈ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ದೂರಿದ್ದಾರೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries