ಮಲಪ್ಪುರಂ: ಮಲಪ್ಪುರಂ ಜಿಲ್ಲೆಯಲ್ಲಿ ದಡಾರ ಜ್ವರ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ತಡೆಗಟ್ಟಲು ಹೆಚ್ಚಿನ ಲಸಿಕೆಗಳನ್ನು ವಿತರಿಸಲಾಗಿದೆ.
ಲಸಿಕೆ ಪಡೆಯದವರಿಗೆ ಮನೆಯಲ್ಲಿಯೇ ಔಷಧಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ರೋಗದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಕೇಂದ್ರ ತಂಡ ಶುಕ್ರವಾರ ಆಗಮಿಸಿದೆ.
ಯಾವ್ಯಾವ ಪ್ರದೇಶಗಳು ಹೆಚ್ಚು ಬಾಧಿತವಾಗಿವೆ ಮತ್ತು ಇದಕ್ಕೆ ಕಾರಣವೇನು ಎಂಬ ಬಗ್ಗೆ ವಿಸ್ತೃತ ಅಧ್ಯಯನ ನಡೆಸಲಾಗುವುದು. ನಂತರ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ. ಯಾವ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂಬುದನ್ನು ಸಭೆ ನಿರ್ಧರಿಸಲಿದೆ.
ಜಿಲ್ಲೆಯಲ್ಲಿ ಈವರೆಗೆ 130 ಮಂದಿಗೆ ಸೋಂಕು ದೃಢಪಟ್ಟಿದೆ. ಯಾರನ್ನೂ ಆಸ್ಪತ್ರೆಗೆ ದಾಖಲಿಸಲಾಗಿಲ್ಲ. ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ತಿರೂರ್ ಮತ್ತು ಮಲಪ್ಪುರಂನ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಜಿಲ್ಲೆಯಲ್ಲಿ 7 ತಿಂಗಳಿಂದ 29 ವರ್ಷದೊಳಗಿನವರು ಸೋಂಕಿಗೆ ಒಳಗಾಗಿದ್ದಾರೆ.
ಮಲಪ್ಪುರಂನಲ್ಲಿ 130 ಜನರಿಗೆ ದಡಾರ/ರುಬೆಲ್ಲಾ ಜ್ವರ: ಲಸಿಕೆಗಳ ವಿತರಣೆ: ವಿಸ್ತೃತ ಅಧ್ಯಯನಕ್ಕಾಗಿ ಕೇಂದ್ರ ತಂಡ ಆಗಮನ
0
November 25, 2022
Tags