HEALTH TIPS

ಮೀಯಪದವಿನಲ್ಲಿ ಶ್ರೀ ವಿಷ್ಣು ಸಹಸ್ರನಾಮ ಹವನ ಸಂಪನ್ನ


              ಮಂಜೇಶ್ವರ: ಮೀಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದÀಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣದ 1008 ನೇ ದಿನದ ಅಂಗವಾಗಿ ಶ್ರೀ ವಿಷ್ಣು ಸಹಸ್ರನಾಮ ಹವನ ಕಾರ್ಯಕ್ರಮ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ವೇದಮೂರ್ತಿ ಹರಿನಾರಾಯಣ ಮಯ್ಯ ನೇತೃತ್ವದಲ್ಲಿ ಶ್ರೀ ವಿಷ್ಣುಸಹಸ್ರನಾಮ ಹವನ ಕಾರ್ಯಕ್ರಮ ಜರಗಿತು.
      ಈ ಸಂದರ್ಭ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂದಿರದ ಗೌರವಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಪಳ್ಳತ್ತಡ್ಕ ವಹಿಸಿದ್ದರು. ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ಮುಕ್ಕ ಶ್ರೀನಿವಾಸ ಯುನಿವರ್ಸಿಟಿಯ ಸಂಸ್ಕøತ ವಿಭಾಗದ ಉಪನ್ಯಾಸಕ ಸೋಂದಾ ಭಾಸ್ಕರ್ ಭಟ್ ಧಾರ್ಮಿಕ ಭಾಷಣಗೈದರು.



        ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಳೂರು, ಮಂದಿರದ ಅಧ್ಯಕ್ಷ ಶ್ರೀಧರ್.ರಾವ್, ಮಂದಿರದ ಗುರುಸ್ವಾಮಿ ರಂಜಿತ್ ಕುಮಾರ್ ಜೋಡುಕಲ್ಲು ಹಾಗೂ ಮಂದಿರದ ಸಂಘಟನಾ ಕಾರ್ಯಧ್ಯಕ್ಷ ದಿವಾಕರ್ ರೈ ಮುನ್ನಿಪ್ಪಾಡಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ  ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ವಿಠಲ ನಾಯ್ಕ್ ಕಲ್ಲಡ್ಕ ಹಾಗೂ ಬಳಗದವರಿಂದ ವಿನೂತನ ಗೀತ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಜರಗಿತು. ಮಂದಿರದ ಪ್ರಧಾನ ಸಂಚಾಲಕ ತಿಮ್ಮಪ್ಪ ಮೈತಾಳ್ ಸ್ವಾಗತಿಸಿ, ಅಧ್ಯಾಪಕ ಚಂದ್ರಶೇಖರ್ ನಾಯಕ್ ವಂದಿಸಿದರು. ಅಧ್ಯಾಪಕ ರಾಮಚಂದ್ರ. ಕೆ.ಎಂ ನಿರೂಪಿಸಿದರು.


 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries