HEALTH TIPS

ರಾಜ್ಯಪಾಲರನ್ನು ಬಲವಾಗಿ ವಿರೋಧಿಸಲಾಗುವುದು; ಇತರ ಪಕ್ಷಗಳು ಬೆಂಬಲ ಕೋರಿದ ಸೀತಾರಾಮ್ ಯೆಚೂರಿ


           ನವದೆಹಲಿ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸಿಪಿಎಂ ಕೇಂದ್ರ ಸಮಿತಿ ಟೀಕಿಸಿದೆ. ಉಪಕುಲಪತಿ ಮತ್ತು ಸಚಿವರ ವಿರುದ್ಧದ ನಡೆ ಅಸಂವಿಧಾನಿಕ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.
          ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ವಿರೋಧಿಸುತ್ತೇವೆ ಎಂದು ಸಿಪಿಎಂ ನಾಯಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವÀರು.
         ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಿಂದುತ್ವದ ಅಜೆಂಡಾವನ್ನು ಜಾರಿಗೆ ತರಲು ಮತ್ತು ಉತ್ತೇಜಿಸಲು ರಾಜ್ಯಪಾಲರು ಪ್ರಯತ್ನಿಸುತ್ತಿದ್ದಾರೆ. ರಾಜ್ಯಪಾಲರ ಕ್ರಮಗಳ ವಿರುದ್ಧ ಕೇರಳದ ಜನತೆ ಒಗ್ಗೂಡಲಿದ್ದಾರೆ ಎಂದು ಸೀತಾರಾಂ ಯೆಚೂರಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಜೆಂಡಾವನ್ನು ಆರೀಫ್ ಮುಹಮ್ಮದ್ ಖಾನ್ ಜಾರಿಗೆ ತರುತ್ತಿದ್ದಾರೆ. ಸಂವಿಧಾನದಲ್ಲಿ ಇಲ್ಲದ ಅಧಿಕಾರ ಚಲಾಯಿಸುವ ಪ್ರಯತ್ನವನ್ನು ಒಪ್ಪಲು ಸಾಧ್ಯವಿಲ್ಲ.
       ರಾಜ್ಯಪಾಲರ ವಿರುದ್ಧ ಎಲ್ಲ ಜಾತ್ಯತೀತ ಪ್ರಜಾಸತ್ತಾತ್ಮಕ ಪಕ್ಷಗಳ ಬೆಂಬಲ ಕೋರಲಾಗಿದೆ. ರಾಜ್ಯಪಾಲರ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಹೇಳಲಿ. ಕಾಂಗ್ರೆಸ್‍ನ ಒಂದು ವಿಭಾಗ ರಾಜ್ಯಪಾಲರ ಪರ ಏಕೆ ಇದೆ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಸಿಪಿಎಂ ಒಟ್ಟಾಗಿ ರಾಜ್ಯಪಾಲರತ್ತ ಸಾಗುವ ಪ್ರಯತ್ನವನ್ನು ಮುಂದುವರೆಸಿದೆ ಎಂದು ಯೆಚೂರಿ ಮಾಧ್ಯಮಗಳಿಗೆ ತಿಳಿಸಿದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries