HEALTH TIPS

ವಿದೇಶ ಪ್ರಯಾಣದ ಮಾಹಿತಿಯನ್ನು ವರದಿ ಮಾಡಲಾಗಿಲ್ಲ: ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಂದ ರಾಷ್ಟ್ರಪತಿ ಹಾಗೂ ಪ್ರಧಾನಿಗೆ ಪತ್ರ


       ನವದೆಹಲಿ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ರಾಷ್ಟ್ರಪತಿ ಮತ್ತು ಪ್ರಧಾನಿಗೆ ಪತ್ರ ಬರೆದಿದ್ದಾರೆ.
           ವಿದೇಶ ಪ್ರವಾಸದ ಮಾಹಿತಿಯನ್ನು ಬಹಿರಂಗಪಡಿಸಿಲ್ಲ ಎಂದು ಪತ್ರದಲ್ಲಿ ಸೂಚಿಸಲಾಗಿದೆ. 10 ದಿನಗಳ ಪ್ರವಾಸದಲ್ಲಿ ಯಾರು ಉಸ್ತುವಾರಿ ವಹಿಸುತ್ತಾರೆ ಎಂಬುದನ್ನು ತಿಳಿಸಿಲ್ಲ ಎಂದು ರಾಜ್ಯಪಾಲರು ಪತ್ರದಲ್ಲಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಸಚಿವರು ವಿದೇಶ ಪ್ರವಾಸದ ವೇಳೆ ಈ ಬಗ್ಗೆ ಮಾಹಿತಿ ನೀಡಿಲ್ಲ. ನಿರ್ಗಮನ ಮತ್ತು ಹಿಂದಿರುಗುವ ನಿಯಮಗಳನ್ನು ಉಲ್ಲಂಘಿಸಲಾಗಿದೆ.
         ಇದಲ್ಲದೆ, ಅವರು ಹಿಂದಿರುಗಿದ ನಂತರ ಏನಾಯಿತು ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಲಾಗಿಲ್ಲ. ವಿದೇಶ ಪ್ರವಾಸದ 10 ದಿನಗಳ ಅವಧಿಯಲ್ಲಿ ಯಾರಿಗೆ ಜವಾಬ್ದಾರಿ ನೀಡಲಾಗಿದೆ ಎಂಬುದೂ ಗೊತ್ತಿಲ್ಲ ಎಂದು ಗಮನ ಸೆಳೆದಿದ್ದಾರೆ. ಕೊಡಿಯೇರಿ ಬಾಲಕೃಷ್ಣನ್ ಅವರ ಅಂತ್ಯಕ್ರಿಯೆಗೆ ಬಂದಾಗ ಮಾತ್ರ ಪ್ರವಾಸದ ಬಗ್ಗೆ ತಿಳಿಸಿದ್ದರು. ಮುಖ್ಯಮಂತ್ರಿಗಳು ಸಾಮಾನ್ಯವಾಗಿ ಹೊರ ತೆರಳುವಾಗ ರಾಜಭವನಕ್ಕೆ ಮೊದಲು ಮತ್ತು ಬಳಿಕ ತಿಳಿಸಬೇಕು ಎಂದು ಹೇಳುವ ಮೂಲಕ ರಾಜ್ಯಪಾಲರು ಈ ವಿಷಯದಲ್ಲಿ ಕೇಂದ್ರದ ಮಧ್ಯಸ್ಥಿಕೆಗೆ ಮನವಿ ಮಾಡಿದ್ದಾರೆ.
        ರಾಜ್ಯದಲ್ಲಿ ಸಮಾನಾಂತರ ಆಡಳಿತ ನಡೆಸಲು ಯತ್ನಿಸುತ್ತಿದ್ದಾರೆ ಎಂಬ ಮುಖ್ಯಮಂತ್ರಿಯವರ ಟೀಕೆ ವಿರುದ್ಧ ನಿನ್ನೆ ರಾಜ್ಯಪಾಲರು ತೀವ್ರ ಟೀಕೆ ಮಾಡಿದ್ದಾರೆ. ರಾಜ್ಯಪಾಲರು ತಾನು ಅನಗತ್ಯ ಹಸ್ತಕ್ಷೇಪ ಮಾಡಿರುವೆ ಎಂಬುದಕ್ಕೆ ಪುರಾವೆ ನೀಡುವಂತೆ ಮುಖ್ಯಮಂತ್ರಿಗೆ ಸೂಚಿಸಿದ್ದರು. ಕಣ್ಣೂರು ವಿ.ಸಿ. ನೇಮಕದಲ್ಲಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿದರು. ಆರ್‍ಎಸ್‍ಎಸ್ ಸಂಪರ್ಕವಿದೆ ಎಂಬ ಮುಖ್ಯಮಂತ್ರಿಗಳು ಹೇಳುವುದಾದರೆ ಅದನ್ನು ಸಾಬೀತುಪಡಿಸಲಿ ಎಂದು ರಾಜ್ಯಪಾಲರು ಸವಾಲು ಹಾಕಿದ್ದಾರೆ. ಆರೆಸ್ಸೆಸ್ ಹಸ್ತಕ್ಷೇಪ ಸಾಬೀತಾದರೆ ಆ ಕ್ಷಣವೇ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಲು ಸಿದ್ಧರಿದ್ದೀರಾ ಎಂದೂ ರಾಜ್ಯಪಾಲರು ಕೇಳಿರುವರು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries