ನಂದಿಗ್ರಾಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಪಶ್ಚಿಮ ಬಂಗಾಳದ ಸಚಿವ ಅಖಿಲ್ ಗಿರಿ ಅವಹೇಳನಾಕಾರಿ ಹೇಳಿಕೆ ನೀಡುವ ಮೂಲಕ ವಿವಾದದಲ್ಲಿ ಸಿಲುಕಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಸಚಿವರ ಹೇಳಿಕೆಗೆ ಸ್ವತಃ ತೃಣಮೂಲ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ನಂದಿಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಖಿಲ್ ಗಿರಿ ಅವರು, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷ ನಾಯಕ ಸುವೆಂಧು ಅಧಿಕಾರಿಯನ್ನು ಟೀಕಿಸುವ ಭರದಲ್ಲಿ ರಾಷ್ಟ್ರಪತಿಗೆ ಅವಹೇಳನ ಮಾಡಿದ್ದಾರೆ.
'ಅವರು
(ಸುವೇಂದು ಅಧಿಕಾರಿ) ನನ್ನನ್ನು ಚೆನ್ನಾಗಿ ಕಾಣುತ್ತಿಲ್ಲವೆಂದು ಟೀಕಿಸಿದ್ದಾರೆ.
ಅವರೆಷ್ಟು ಚೆಂದ ಇದ್ದಾರೆ? ಜನ ಹೇಗೆ ಕಾಣಿಸುತ್ತಾರೆ ಎಂಬುದರ ಮೇಲೆ ವ್ಯಕ್ತಿತ್ವ
ಅಳೆಯಬಾರದು. ನಾವು ರಾಷ್ಟ್ರಪತಿಗಳ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ಅವರು ಹೇಗೆ
ಕಾಣುತ್ತಾರೆ?' ಎಂದು ನಗುತ್ತಾ ಹೇಳುತ್ತಿರುವ ವಿಡಿಯೊ ವೈರಲ್ ಆಗಿದೆ.
ಸಚಿವರ ಹೇಳಿಕೆಯ ವಿಡಿಯೋ ವೈರಲ್ ಆದ ಬಳಿಕ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಅಖಿಲ್ ಗಿರಿ ತಮ್ಮ ಹೇಳಿಕೆಗಾಗಿ ಕ್ಷಮೆ ಯಾಚಿಸಿದ್ದಾರೆ.