HEALTH TIPS

ಜ್ಞಾನವಾಪಿ: ಶಿವಲಿಂಗ ಪತ್ತೆಯಾದ ಪ್ರದೇಶ ಸಂರಕ್ಷಣೆ ಆದೇಶ ವಿಸ್ತರಿಸಿದ 'ಸುಪ್ರೀಂ'

 

             ನವದೆಹಲಿ: ವಾರಾಣಸಿಯ ಜ್ಞಾನವಾಪಿ-ಶೃಂಗಾರ ಗೌರಿ ಸಂಕೀರ್ಣದ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ 'ಶಿವಲಿಂಗ' ಇರುವ ಪ್ರದೇಶವನ್ನು ಮುಂದಿನ ಆದೇಶದ ವರೆಗೆ ಸಂರಕ್ಷಣೆ ಮಾಡುವಂತೆ ಸುಪ್ರೀಂಕೋರ್ಟ್‌ ಶುಕ್ರವಾರ ಸೂಚಿಸಿದೆ.

                   ಅಲ್ಲದೇ, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಕ್ರೋಡಿಕರಿಸಿ ವಾರಾಣಸಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲು ಹಿಂದೂ ಕಕ್ಷಿದಾರರಿಗೆ ಅನುಮತಿ ನೀಡಿದೆ.

                    ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಪಿ.ಎಸ್‌.ನರಸಿಂಹ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

                  ಸರ್ವೆ ಆಯುಕ್ತರ ನೇಮಕ ಮಾಡಿ ಅಲಹಾಬಾದ್‌ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸೀದಿಯ ವ್ಯವಸ್ಥಾಪನಾ ಮಂಡಳಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿ ಮೂರು ವಾರಗಳ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆಯೂ ಹಿಂದೂ ಕಕ್ಷಿದಾರರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.

               ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗ ಇರುವ ಪ್ರದೇಶವನ್ನು ಸಂರಕ್ಷಣೆಗೆ ಸಂಬಂಧಿಸಿ ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಸೂಚನೆ ನೀಡಿ ಸುಪ್ರೀಂಕೋರ್ಟ್‌ ಮೇ 17ರಂದು ಮಧ್ಯಂತರ ಆದೇಶ ನೀಡಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries