HEALTH TIPS

ರಾಜ್ಯಪಾಲರ ಕ್ರಮ ರಾಜಕೀಯ ಅಜೆಂಡಾ ಹೊಂದಿದೆ ಎಂಬ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್


             ಕೊಚ್ಚಿ; ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ.
           ವಿಧಾನಸಭೆ ಅಂಗೀಕರಿಸಿದ ವಿಧೇಯಕಗಳ ಕುರಿತು ತೀರ್ಮಾನ ಕೈಗೊಳ್ಳದೆ ಕಾಲಹರಣ ಮಾಡುತ್ತಿರುವ ಕ್ರಮವನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಹೈಕೋರ್ಟ್ ವಕೀಲ ಪಿ.ವಿ.ಜಿತೇಶ್ ಅವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
              ನಿರ್ಧಾರ ತೆಗೆದುಕೊಳ್ಳದೆ ಮಸೂದೆಗಳನ್ನು ವಿಳಂಬ ಮಾಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಸೂಚಿಸಲಾಗಿತ್ತು.
          ರಾಜ್ಯಪಾಲರ ಕ್ರಮಗಳು ಕೆಲವು ರಾಜಕೀಯ ಅಜೆಂಡಾಗಳೊಂದಿಗೆ ಇರುತ್ತವೆ. ಶಾಸಕಾಂಗ ಅಂಗೀಕರಿಸುವ ಮಸೂದೆಗೆ ಅಂಕಿತ ಹಾಕುವುದು ರಾಜ್ಯಪಾಲರ ಸಾಂವಿಧಾನಿಕ ಬಾಧ್ಯತೆಯಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.ಆದರೆ, ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಹಿ ಹಾಕಲು ಕಾಲಮಿತಿ ಇಲ್ಲ ಎಂದು ತಿಳಿಸಿದ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯನ್ನು ತಿರಸ್ಕರಿಸಿತು.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries