HEALTH TIPS

ಮಂಗಳೂರು ಬಾಂಬ್​ ಸ್ಫೋಟ ಪ್ರಕರಣ ಇನ್ನು NIA ಕೈಗೆ.

 

              ಮಂಗಳೂರು: ಇತ್ತೀಚೆಗೆ ಆರೋಪಿ ಶಾರಿಕ್​ ಇಸ್ಲಾಮಿಕ್​ ಸ್ಟೇಟ್ಸ್​ ಮಾದರಿಯಲ್ಲೇ ಕುಕ್ಕರ್​ ಬಾಂಬ್​ ಹಿಡಿದು ನಿಂತ ಫೋಟೊ ಒಂದು ವೈರಲ್​ ಆಗಿತ್ತು. ಶಾರೀಕ್​ ಕೈಯಲ್ಲಿದ್ದ ಬಾಂಬ್​ಗೆ ಇಡೀ ಬಸ್​ ಸ್ಫೋಟ ಮಾಡುವ ಸಾಮರ್ಥ್ಯ ಇತ್ತು ಎನ್ನುವ ಮಾಹಿತಿಯೂ ಬಹಿರಂಗಗೊಂಡಿತ್ತು.

ಇದೀಗ ಈ ಘಟನೆಯ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಳಿದಿದೆ.

                  ಕುಕ್ಕರ್ ಬಾಂಬ್ ಬ್ಲಾಸ್ಟ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಶಾರೀಕ್​​ನನ್ನು ಬೆಂಬಲಿಸಿ ಇದೀಗ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​ ಮಾಧ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. ಅದರ ಜೊತೆಗೆ ಆತನ ಬಂಧನಕ್ಕೆ ಪ್ರತೀಕಾರವನ್ನೂ ತೆಗೆದುಕೊಳ್ಳುತ್ತೇವೆ ಎನ್ನುವ ರೀತಿಯ ಹೇಳಿಕೆಯನ್ನು ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​ ನೀಡಿತ್ತು.

              ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಪ್ರಕರಣದ ಸಂಪೂರ್ಣ ತನಿಖೆ NIAಗೆ ಹಸ್ತಾಂತರ ಮಾಡಲಅಗುತ್ತಿದೆಯೇ ಎಂಬ ಅನುಮಾನ ಹುಟ್ಟಿಕೊಂಡಿದೆ. ಸದ್ಯ NIAಯ ದೆಹಲಿ ಬ್ರಾಂಚ್ ನಲ್ಲಿ ಪ್ರಕರಣ ದಾಖಲಾಗಿದ್ದು ಶಂಕಿತ ಉಗ್ರ ಶಾರೀಕ್​ ವಿರುದ್ಧ UAPA ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries