HEALTH TIPS

ಇದು 1962 ಅಲ್ಲ: ಖಂಡು

 

               ಶಿಲ್ಲಾಂಗ್: 'ಇದು 1962 ಅಲ್ಲ. ಅತಿಕ್ರಮಣ ಮಾಡಲು ಪ್ರಯತ್ನಿಸುವವರಿಗೆ ನಮ್ಮ ಧೀರ ಯೋಧರು ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ' ಎಂದು ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಮಂಗಳವಾರ ಹೇಳಿದ್ದಾರೆ.

            ರಾಜ್ಯದ ತವಾಂಗ್‌ ಸೆಕ್ಟರ್‌ನ ಯಾಂಗ್‌ಟ್ಸೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

               'ಯಾಂಗ್‌ಟ್ಸೆ ನಾನು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರದಲ್ಲಿದೆ. ಪ್ರತಿವರ್ಷ ಈ ಪ್ರದೇಶಕ್ಕೆ ನಾನು ಭೇಟಿ ನೀಡಿ, ಅಲ್ಲಿನ ಗ್ರಾಮಸ್ಥರು ಹಾಗೂ ಯೋಧರನ್ನು ಭೇಟಿ ಮಾಡುತ್ತೇನೆ' ಎಂದು ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries