HEALTH TIPS

ತೆಲಂಗಾಣ: ಬಂಡೆಗಳ ಮಧ್ಯೆ 3 ದಿನ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

 

           ಹೈದರಾಬಾದ್: ಇಲ್ಲಿನ ಕಾಮಾರೆಡ್ಡಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಂಡೆಗಳ ಮಧ್ಯೆ ಕಿರಿದಾದ ಪ್ರದೇಶದಲ್ಲಿ ಸಿಲುಕಿದ್ದ 36 ವರ್ಷದ ವ್ಯಕ್ತಿಯನ್ನು ಮೂರು ದಿನಗಳ ಬಳಿಕ ಗುರುವಾರ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.

               ರೆಡ್ಡಿಪೇಟ್‌ ಗ್ರಾಮದ ಸಿ.ರಾಜು ಅವರು ಮಂಗಳವಾರ ಸ್ನೇಹಿತರೊಂದಿಗೆ ಅರಣ್ಯ ಪ್ರದೇಶಕ್ಕೆ ತೆರಳಿದ್ದರು.ಈ ವೇಳೆ ಬಂಡೆಗಳ ನಡುವಿನ ಕಿರಿದಾದ ಜಾಗದಲ್ಲಿ ಬಿದ್ದ ಮೊಬೈಲ್‌ ತೆಗೆದುಕೊಳ್ಳಲು ಹೋಗಿ ತಾವೇ ಸಿಲುಕಿದ್ದರು.

               'ವಿಷಯ ತಿಳಿದ ಪೊಲೀಸ್‌ ಅಧಿಕಾರಿಗಳು ಇತರ ಇಲಾಖೆಗಳ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗುರುವಾರ ನಿಯಂತ್ರಿತ ಸ್ಫೋಟಕಗಳನ್ನು ಬಳಸಿ ಬಂಡೆಗಳನ್ನು ಒಡೆದು ರಾಜು ಅವರನ್ನು ರಕ್ಷಣೆ ಮಾಡಲಾಯಿತು. ಕಾರ್ಯಾಚರಣೆ ಸಂದರ್ಭದಲ್ಲಿ ರಾಜು ಅವರಿಗೆ ಆಮ್ಲಜನಕ ಮತ್ತು ದ್ರವ ರೂಪದ ಆಹಾರವನ್ನು ನೀಡಲಾಗಿತ್ತು' ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries