HEALTH TIPS

ಆಕಾಶ್‌ಝೆಪ್‌: ಯುವಕರಿಗೆ ವಾಯುಪಡೆಗೆ ಸೇರಲು ಸ್ಪೂರ್ತಿ ನೀಡುವ ಕೃತಿ

 

             ಪುಣೆ: ನಿವೃತ್ತ ಏರ್‌ ಮಾರ್ಷಲ್‌ ಭೂಷಣ್‌ ಗೋಖಲೆ ಮತ್ತು ಅವರ ಪತ್ನಿ ಮೇಘನಾ ಜೊತೆಯಾಗಿ ರಚಿಸಿರುವ 'ಆಕಾಶ್‌ಝೆಪ್‌' ಕೃತಿಯನ್ನು ಏರ್‌ ಚೀಫ್‌ ಮಾರ್ಷಲ್‌ ವಿ.ಆರ್‌.ಚೌಧರಿ ಅವರು ಪುಣೆಯಲ್ಲಿ ಗುರುವಾರ ಬಿಡುಗಡೆಗೊಳಿಸಿದರು. ಈ ಪುಸ್ತಕವು ಯುವಕರನ್ನು ಭಾರತೀಯ ವಾಯು ಪಡೆ (ಐಎಎಫ್‌)ಗೆ ಸೇರಲು ಸ್ಪೂರ್ತಿ ನೀಡುತ್ತದೆ ಎಂದರು.

                  ಭಾರತೀಯ ವಾಯು ಪಡೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಅವಧಿಯ ಅನುಭವಗಳನ್ನು ಮತ್ತು ಘಟನೆಗಳನ್ನು ಗೋಖಲೆ ಅವರು ಕೃತಿಯಲ್ಲಿ ಹಂಚಿಕೊಂಡಿದ್ದಾರೆ.

                 ಗೋಖಲೆ ಅವರು ಅತ್ಯುತ್ತಮ ನಾಯಕ. ವೃತ್ತಿಯಲ್ಲಿ ಅಸಾಧಾರಣ ನಿರ್ವಹಣೆ ತೋರಿದ್ದಾರೆ. ಹೆಚ್ಚಿನದಾಗಿ ಕೃತಿಕಾರರಾದ ಗೋಖಲೆ ಜೋಡಿ ಮಾನವೀಯತೆಯ ದ್ಯೋತಕ ಎಂದು ಚೌಧರಿ ಶ್ಲಾಘಿಸಿದರು

                ಯುವಕರಿಗೆ ಸ್ಪೂರ್ತಿ ನೀಡುವ ಕೃತಿಯಿದು. ಈ ಪುಸ್ತಕವನ್ನು ಓದಿದ ಬಳಿಕ ಸಾವಿರಾರು ಯುವಕರು ಭಾರತೀಯ ವಾಯು ಪಡೆಗೆ ಸೇರಲು ಉತ್ಸುಕರಾಗುತ್ತಾರೆ ಮತ್ತು ಗೋಖಲೆ ಅವರ ಹೆಜ್ಜೆಗಳನ್ನು ಹಿಂಬಾಲಿಸುತ್ತಾರೆ ಎಂಬುದನ್ನು ಖಂಡಿತವಾಗಿ ಹೇಳಬಲ್ಲೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries