HEALTH TIPS

ಹೆಪ್ಪುಗಟ್ಟಿದ ಸರೋವರದ ಮೇಲೆ ನಡೆಯುವಾಗ ಕುಸಿದು ಭಾರತ ಮೂಲದ ಮೂವರ ಸಾವು

 

              ವಾಷಿಂಗ್ಟನ್: ಹೆಪ್ಪುಗಟ್ಟಿದ ಸರೋವರದ ಮೇಲೆ ನಡೆಯುತ್ತಿದ್ದಾಗ ಮಂಜುಗಡ್ಡೆ ಕುಸಿದು, ಭಾರತ ಮೂಲದ ಮೂವರು ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

                     ಅಮೆರಿಕದ ಅರಿಜೋನಾ ರಾಜ್ಯದ ಕೊಕೊನಿನೊ ಕೌಂಟಿಯ ವುಡ್ಸ್ ಕ್ಯಾನಿಯನ್ ಸರೋವರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಒಬ್ಬ ಮಹಿಳೆ ಸೇರಿ ಭಾರತ ಮೂಲದ ಮೂವರು ಮೃತಪಟ್ಟಿದ್ದಾರೆ.

                ‘ಮೃತರನ್ನು ನಾರಾಯಣ ಮುದ್ದನ(49), ಗೋಕುಲ್ ಮೆದಿಸೇಟಿ(47) ಮತ್ತು ಹರಿತಾ ಮುದ್ದನ ಎಂದು ಗುರುತಿಸಲಾಗಿದೆ. ಮೃತರು ಅರಿಜೋನಾದ ಚಾಂಡ್ಲರ್ ನಿವಾಸಿಗಳಾಗಿದ್ದು, ಭಾರತ ಮೂಲದವರಾಗಿದ್ದಾರೆ’ ಎಂದು ಕೊಕಿನಿನೊ ಕೌಂಟಿ ಪೊಲೀಸ್ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

              ಸರೋವರಕ್ಕೆ ಬಿದ್ದ ಹರಿತಾ ಮುದ್ದನ ಅವರನ್ನು ಮೇಲೆತ್ತುವಲ್ಲಿ ಸಿಬ್ಬಂದಿ ಯಶಸ್ವಿಯಾದರೂ, ಆದರೆ, ಜೀವ ಉಳಿಸುವ ಎಲ್ಲ ತಕ್ಷಣದ ಚಿಕಿತ್ಸೆ ನೀಡಿದರೂ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

                 ಅಮೆರಿಕ ಮತ್ತು ಕೆನಡಾದ ಹಲವೆಡೆ ಶೀತ ಮಾರುತದ ಅಬ್ಬರ ಜೋರಾಗಿದ್ದು, ಸುಮಾರು 25 ಕೋಟಿ ಜನರು ಇದರ ಹೊಡೆತಕ್ಕೆ ಸಿಲುಕಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries