ಕಾಸರಗೋಡು: ಮಹಿಳಾ ಸಮಾನತೆಗಾಗಿ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಸಾಂಸ್ಕøತಿಕ ಇಲಾಖೆ ಆಯೋಜಿಸಿರುವ ಸಾಂಸ್ಕೃತಿಕ ಆಂದೋಲನ ‘ಸಮಮ್ ಯೋಜನೆ’ಯ ಸಾಂಸ್ಕೃತಿಕ ಉತ್ಸವವನ್ನು ಬೇಡಡ್ಕ ಪಂಚಾಯಿತಿಯ ಕುಂಡಂಕುಳಿಯಲ್ಲಿ ಜನವರಿ ಕೊನೆಯ ವಾರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕುಂಡಂಕುಳಿ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಸಂಘಟನಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇರಳ ಭಾμÁ ಸಂಸ್ಥೆಯ ನಿರ್ದೇಶಕ ಡಾ.ಎಂ.ಸತ್ಯನ್ ಉದ್ಘಾಟಿಸಿದರು. ಬೇಡಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಧನ್ಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿದ್ದರು.
ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಜನವರಿ ಕೊನೆಯ ವಾರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಅನುಷ್ಠಾನಕ್ಕಾಗಿ ವಿವಿಧ ಉಪಸಮಿತಿಗಳನ್ನೂ ರಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಸ್ ಪಾದೂರು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಇ.ಪದ್ಮಾವತಿ, ಡಿಪಿಸಿ ಸರಕಾರಿ ನಾಮನಿರ್ದೇಶಿತ ಸಿ.ರಾಮಚಂದ್ರನ್, ಜಿಲ್ಲಾ ಮಾಹಿತಿ ಅಧಿಕಾರಿ ಎಂ. ಮಧುಸೂದನನ್, ಯುವ ಕಲ್ಯಾಣ ಮಂಡಳಿ ಜಿಲ್ಲಾ ಸಂಯೋಜಕ ಎ.ವಿ.ಶಿವಪ್ರಸಾದ್, ಭಾμÁ ಸಂಸ್ಥೆ ಸಹಾಯಕ ನಿರ್ದೇಶಕ ಎನ್.ಜಯಕೃಷ್ಣನ್, ಬರಹಗಾರ ಎಂ. ಚಂದ್ರಪ್ರಕಾಶ್, ವಜ್ರ ಮಹೋತ್ಸವದ ಜಿಲ್ಲಾ ಸಂಯೋಜಕ ಪ್ರವೀಣ್ ನಾರಾಯಣನ್, ಬೇಡಡುಕ ಗ್ರಾಮ ಪಂಚಾಯಿತಿ ಸದಸ್ಯರಾದ ಚೆಂಬಕಾಡ್ ನಾರಾಯಣನ್, ಎಂ.ತಾಂಪನ್, ಪಂಚಾಯಿತಿ ಯೋಜನಾ ಸಮಿತಿ ಸದಸ್ಯ ಎಂ.ಅನಂತನ್, ಸಿ.ಡಿ. ಎಸ್ ಅಧ್ಯಕ್ಷೆ ಎಂ.ಗುಲಾಬಿ ಮಾತನಾಡಿದರು.
ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು, ಸಿಡಿಎಸ್ ವಾರ್ಡ್ ಸದಸ್ಯರು, ವಜ್ರ ಮಹೋತ್ಸವದ ಕಲಾವಿದರು, ವ್ಯಾಪಾರ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಕೆ.ಪ್ರದೀಪನ್ ಸ್ವಾಗತಿಸಿ, ಬೇಡಡ್ಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎ. ಮಾಧವನ್ ವಂದಿಸಿದರು.
ಜನವರಿ ಕೊನೆಯ ವಾರದಲ್ಲಿ ಕುಂಡಂಕುಳಿಯಲ್ಲಿ ಸಮಂ ಸಾಂಸ್ಕøತಿಕೋತ್ಸವ: ಸಂಘಟನಾ ಸಮಿತಿ ರಚನೆ
0
December 29, 2022