ನವದೆಹಲಿ: ನಿರ್ಬಂಧ ಎದುರಿಸುತ್ತಿರುವವರಿಗೆ ಮಾನವೀಯ ನೆರವುಗಳಿಗೆ
ವಿನಾಯಿತಿ ನೀಡುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ
ತಟಸ್ಥವಾಗಿ ಉಳಿದಿದೆ.
ತನ್ನ ನೆರೆ ರಾಷ್ಟ್ರದಲ್ಲಿರುವ ಭಯೋತ್ಪಾದಕ ಗುಂಪು ಸೇರಿದಂತೆ ನಿರ್ಬಂಧ
ಎದುರಿಸುತ್ತಿರುವ ಹಲವು ಭಯೋತ್ಪಾದಕ ಸಂಘಟನೆಗಳು ಇಂತಹ ವಿನಾಯಿತಿಗಳನ್ನು
ದುರುಪಯೋಗಪಡಿಸಿಕೊಳ್ಳುತ್ತಿವೆ ಹಾಗೂ ಈ ಮೂಲಕ ದೇಣಿಗೆ ಗಳಿಸಿ, ತನಗೆ ಬೇಕಾದವರನ್ನು
ನೇಮಕ ಮಾಡಿಕೊಳ್ಳುತ್ತಿದೆ ಎಂದು ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.
15 ರಾಷ್ಟ್ರಗಳ ಮಂಡಳಿಯಲ್ಲಿ ಭಾರತ ಅಧ್ಯಕ್ಷತೆ ವಹಿಸಿದೆ. ನಿರ್ಣಯವನ್ನು ಅಮೇರಿಕ ಹಾಗೂ ಐರ್ಲೇಂಡ್ ಗಳು ಮಂಡಿಸಿದ್ದವು.
ಈ ನಿರ್ಣಯವನ್ನು ಅಂಗೀಕರಿಸಿದ ಬಳಿಕ ಹಲವು ಜೀವಗಳು ಉಳಿಯಲಿದೆ ಎಂದು ನಿರ್ಣಯ ಮಂಡಿಸಿದ
ಅಮೇರಿಕ, ಐರ್ಲೆಂಡ್ ಹೇಳಿವೆ. 14 ಸದಸ್ಯ ರಾಷ್ಟ್ರಗಳು ನಿರ್ಣಯದ ಪರವಾಗಿ ಮತ
ಚಲಾಯಿಸಿದರೆ, ಭಾರತ ಒಂದೇ ತಟಸ್ಥವಾಗಿ ಉಳಿದ ರಾಷ್ಟ್ರವಾಗಿತ್ತು.
ನಿರ್ಬಂಧಗಳಿಂದ ಮಾನವೀಯ ನೆರವುಗಳಿಗೆ ವಿನಾಯಿತಿ ನಿರ್ಣಯ: ಮತ ಚಲಾಯಿಸದೇ ತಟಸ್ಥವಾಗಿ ಉಳಿದ ಭಾರತ
0
December 10, 2022
Tags