HEALTH TIPS

ಕ್ಲಾಸ್​ಮೇಟ್​ಗೆ ವಾಟ್ಸ್​ಆಯಪ್​ ಮೆಸೇಜ್​ ಮಾಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ: ನಂತರ ನಡೆದಿದ್ದು ದುರಂತ ಘಟನೆ

 

                ಇಡುಕ್ಕಿ: ಸಣ್ಣ ಸಣ್ಣ ಕಾರಣಗಳಿಗೂ ಹದಿ ಹರೆಯದವರು ಸಾವಿನ ಹಾದಿ ಹಿಡಿಯುತ್ತಿರುವುದು ತುಂಬಾ ಕಳವಳಕಾರಿಯಾಗಿದೆ. ಅದರಲ್ಲೂ ಈ ಮೊಬೈಲ್​ ಯುಗದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಬೇಕಿದೆ.

ಇಲ್ಲದಿದ್ದರೆ ಅನಾಹುತಗಳಿಗೆ ಎಡೆ ಮಾಡಿಕೊಟ್ಟಂತಾಗುತ್ತದೆ.

                  ಕೇರಳದಲ್ಲಿ 15 ವರ್ಷದ ವಿದ್ಯಾರ್ಥಿನಿ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಈ ಘಟನೆ ಇಡುಕ್ಕಿ ಜಿಲ್ಲೆಯ ಕನ್ನಂಪಾಡಿಯಲ್ಲಿ ನಡೆದಿದೆ. ಕ್ಷುಲಕ ಕಾರಣಕ್ಕೆ ಬಾಲಕಿ ಸಾವಿಗೆ ಶರಣಾಗಿದ್ದಾಳೆ. ಮೃತಳನ್ನು ದೇವು ಎಂದು ಗುರುತಿಸಲಾಗಿದೆ. ಈಕೆ ಕನ್ನಂಪಾಡಿ ನಿವಾಸಿ ಅಜು ಎಂಬುವರ ಮಗಳು. ದೇವು 10ನೇ ತರಗತಿ ವಿದ್ಯಾರ್ಥಿನಿ.

                 ತನ್ನ ಶಾಲಾ ಸಹಪಾಠಿ ಹುಡುಗನಿಗೆ ದೇವು ವಾಟ್ಸ್​ಆಯಪ್​ನಲ್ಲಿ ಮೆಸೇಜ್​ ಮಾಡುತ್ತಿರುವುದನ್ನು ಗಮನಿಸಿದ ಪಾಲಕರು, ಆಕೆಗೆ ಬೈದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ಮನನೊಂದುಕೊಂಡ ದೇವು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡಿದ್ದಾಳೆ.

              ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries