ಕೊಚ್ಚಿ: ಸರ್ಕಾರೇತರ ಸಂಸ್ಥೆಗಳ ಸಹಕಾರದಲ್ಲಿ ಕೇರಳದ ಪ್ರತಿ ಜಿಲ್ಲೆಯಲ್ಲೂ ಒಂದೊಂದು ವೃದ್ಧಾಶ್ರಮ ಸ್ಥಾಪಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಶನಿವಾರ ಹೇಳಿದ್ದಾರೆ.
ಕೇಂದ್ರ ಸರ್ಕಾರವು ಜಾತಿ ಮತ್ತು ಧರ್ಮವನ್ನು ಪರಿಗಣಿಸದೆ ಸಮಾಜದ ಎಲ್ಲಾ ವರ್ಗದವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದಲ್ಲಿ ಇದುವರೆಗೆ 1,658 ವೃದ್ಧಾಶ್ರಮಗಳನ್ನು ಸಾಮಾಜಿಕ ನ್ಯಾಯ ಇಲಾಖೆಯ ಅಧೀನದಲ್ಲಿ ಸ್ಥಾಪಿಸಲಾಗಿದೆ. ಅದರಲ್ಲಿ ಒಂಬತ್ತು ವೃದ್ಧಾಶ್ರಮಗಳು ಕೇರಳದಲ್ಲಿವೆ ಎಂದೂ ವಿವರಿಸಿದ್ದಾರೆ.
1,720 ವ್ಯಸನಮುಕ್ತ ಕೇಂದ್ರಗಳಲ್ಲಿ 109 ಕೇಂದ್ರಗಳು ಕೇರಳದಲ್ಲಿ ಕಾರ್ಯಾಚರಿಸುತ್ತಿವೆ ಎಂದಿದ್ದಾರೆ.