ತಿರುವನಂತಪುರ: ಮನ್ನಾರ್ ಕೊಲ್ಲಿ ಮತ್ತು ಕೊಮೊರಿನ್ ಪ್ರದೇಶದಲ್ಲಿ ಇಂದು ಮತ್ತು ನಾಳೆ ಈಶಾನ್ಯ ದಿಕ್ಕಿನಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಮತ್ತು ಕೆಲವು ಸಂದರ್ಭ 65 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. .
ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಮುನ್ನೆಚ್ಚರಿಕೆ ಪ್ರದೇಶಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿಗಳು ತಿಳಿಸಿರುವರು. ಇದೇ ವೇಳೆ, ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ತೀವ್ರ ವಾಯುಭಾರ ಕುಸಿತದ ಚಂಡಮಾರುತದ ಹವಾಮಾನ ಎಚ್ಚರಿಕೆಯಿಂದಾಗಿ ಕೆಲಸದ ದಿನಗಳನ್ನು ಕಳೆದುಕೊಂಡಿರುವ ಮೀನುಗಾರರ ಕುಟುಂಬಗಳಿಗೆ ಪರಿಹಾರವಾಗಿ 50.027 ಕೋಟಿ ರೂ.ಗಳನ್ನು ಮಂಜೂರು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಬಲ ಗಾಳಿಯ ಸಾಧ್ಯತೆ; ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಲ್ಲಿ ಸೂಚನೆ
0
January 19, 2023