HEALTH TIPS

ರಾಜಸ್ಥಾನದಲ್ಲಿ ಆಲಿಕಲ್ಲು ಸಹಿತ ಮಳೆ: ಜನ ಜೀವನ ಅಸ್ತವ್ಯಸ್ತ

 

              ಜೈಪುರ: ರಾಜಸ್ಥಾನದಲ್ಲಿ ಬಹುತೇಕ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಹೀಗಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

                 ಉದಯಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ.

ಇದರಿಂದ ಹಲವೆಡೆ ರೈತರು ಬೆಳೆದ ಬೆಳೆಗಳು ನಾಶವಾಗಿವೆ. ಈ ಕುರಿತು ಇಂದು ಮಧ್ಯಾಹ್ನ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಪರಿಸ್ಥಿತಿ ಕುರಿತು ಚರ್ಚಿಸಲಿದೆ.

                       'ರಾಜ್ಯದ ಪೂರ್ವ ಮತ್ತು ಪಶ್ಚಿಮ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ' ಎಂದು ಇಲಾಖೆ ತಿಳಿಸಿದೆ.

                   ಕರೇಡಾ ಮತ್ತು ಪರ್ಬತ್ಸರ್ 78 ಸೆಂ.ಮೀ.ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆ ದಾಖಲಾಗಿದೆ. ಜೈಪುರದಲ್ಲಿ 24.9 ಸೇರಿದಂತೆ ಇತರ ಪ್ರದೇಶಗಳಲ್ಲಿ 8 ಸೆಂಮೀಗಿಂತ ಕಡಿಮೆ ಮಳೆಯಾಗಿದೆ. ಜೋಧಪುರದ ಫಲೋಡಿಯಲ್ಲಿ ಕನಿಷ್ಠ ತಾಪಮಾನ 5.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಇನ್ನೂಳಿದಂತೆ ಸಿರೋಹಿ 8.1 ಡಿಗ್ರಿ ಸೆಲ್ಸಿಯಸ್ ಮತ್ತು ಉದಯಪುರ 14.6 ಡಿಗ್ರಿ ದಾಖಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries