HEALTH TIPS

ಕುಂಬಳೆಯಲ್ಲಿ ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ


                  ಕುಂಬಳೆ: ಯುವ ಕಾಂಗ್ರೆಸ್ ಕುಂಬಳೆ ಮಂಡಲ ಸಮಿತಿ ಮತ್ತು ಯುವ ಕಾಂಗ್ರೆಸ್ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಕುಂಬಳೆಯಲ್ಲಿ ಮಹಾತ್ಮಾ ಗಾಂಧಿ ಹುತಾತ್ಮ ದಿನಾಚರಣೆ ಸೋಮವಾರ ನಡೆಯಿತು.
            ಯುವ ಕಾಂಗ್ರೆಸ್ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಜುನೈದ್ ಉರ್ಮಿ ಅಧ್ಯಕ್ಷತೆ ವಹಿಸಿದ್ದರು. ಕುಂಬಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಪ್ರಭು ಕುಂಬಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂಬಳೆ ಮಂಡಲ ಕಾಂಗ್ರೆಸ್ ಅಧ್ಯಕ್ಷ ರವಿ ಪೂಜಾರಿ, ಬ್ಲಾಕ್ ಕಾರ್ಯದರ್ಶಿ, ಹಿರಿಯ ನಾಯಕ ರಾಮ ಕಾರ್ಳೆ, ಮಂಡಲ ಕಾರ್ಯದರ್ಶಿ ರಮೇಶ್ ಗಾಂಧಿನಗರ, ಗ್ರಾಮ ಪಂಚಾಯತಿ ಸದಸ್ಯ ರವಿರಾಜ, ಯುವ ಕಾಂಗ್ರೆಸ್ ಮಂಡಲ ಅಧ್ಯಕ್ಷ  ನಾರಾಯಣ ಕಿದೂರು, ಹಿರಿಯ ಕಾಂಗ್ರೆಸ್ ನಾಯಕ ಮೋಯಿನ್ ಕಡಪ್ಪುರ, ಕಾಂಗ್ರೆಸ್ ನಾಯಕ ರವೀಂದ್ರ ಕಿದೂರು, ಕೆ.ಎಸ್.ಯು ನೇತಾರರಾದ ಕಾರ್ತಿಕ್ ಉಪ್ಪಳ, ನವೀನ್ ಕುಮಾರ್ ಮುಂತಾದವರು ಮಹಾತ್ಮ ಗಾಂಧೀಜಿಯವರ ತ್ಯಾಗ ಬಲಿದಾನಗಳ ಬಗ್ಗೆ ಮಾತನಾಡಿದರು.
           ಪ್ರದೇಶದ ನಾಗರಿಕರು, ವ್ಯಾಪಾರಿಗಳು ಪ್ರಾರ್ಥನೆ ಮತ್ತು ಪುμÁ್ಪರ್ಚನೆಯಲ್ಲಿ ಭಾಗವಹಿಸಿದರು. ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಕುಂಬಳೆ ಸ್ವಾಗತಿಸಿ, ಯುವ ಕಾಂಗ್ರೆಸ್ ಮಂಡಲ ಉಪಾಧ್ಯಕ್ಷ ರಾಕೇಶ್ ರೈ ಕಿದೂರು ವಂದಿಸಿದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries