ನವದೆಹಲಿ: 'ಪರಿಣತ ಸಿಬ್ಬಂದಿಯಿಂದ ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಳ್ಳುವ ಹಕ್ಕು ಗ್ರಾಮೀಣ ಪ್ರದೇಶದಲ್ಲಿ ನೆಲೆಸಿರುವ ನಾಗರಿಕರಿಗೂ ಇದೆ' ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
2004ರ ಅಸ್ಸಾಂ ಗ್ರಾಮೀಣ ಆರೋಗ್ಯ ನಿಯಂತ್ರಣ ಪ್ರಾಧಿಕಾರ ಕಾಯ್ದೆಯನ್ನು ಅನೂರ್ಜಿತಗೊಳಿಸಿರುವ ಗುವಾಹಟಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ, ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.





