HEALTH TIPS

ಬಾರಾಮುಲ್ಲಾ: ಉಗ್ರರ ನೇಮಕಾತಿ ಜಾಲ ಭೇದಿಸಿದ ಸೇನೆ

 

               ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕರು ಸಾಮಾಜಿಕ ಜಾಲತಾಣಗಳ ಮೂಲಕ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸುತ್ತಿದ್ದ ಉಗ್ರ ನೇಮಕಾತಿ ಜಾಲವನ್ನು ಭದ್ರತಾ ಪಡೆಗಳು ಭೇದಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

          'ಇಬ್ಬರು ಬಾಲಕರು ಸೇರಿ ಐವರು ಯುವಕರನ್ನು ಭಯೋತ್ಪಾದಕರ ಕಪಿಮುಷ್ಟಿಯಿಂದ ರಕ್ಷಿಸಲಾಗಿದೆ. ಬಳಿಕ ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸಿ, ಬಾರಾಮುಲ್ಲಾ ಜಿಲ್ಲೆಯ ಪಟ್ಟಣ್‌ ಪ್ರದೇಶದಲ್ಲಿರುವ ಅವರ ಪಾಲಕರಿಗೆ ಹಸ್ತಾಂತರಿಸಲಾಗಿದೆ' ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಮೋದ್ ನಾಗ್ಪುರೆ ತಿಳಿಸಿದ್ದಾರೆ.

                'ಉಗ್ರ ಸಂಘಟನೆ ಸೇರಿಕೊಳ್ಳುವಂತೆ ಯುವಕರಿಗೆ ಆಮಿಷ ಒಡ್ಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಶ್ವಾಸಾರ್ಹ ಮೂಲಗಳಿಂದ ಲಭ್ಯವಾಗಿತ್ತು. ಕೂಡಲೇ ಭದ್ರತಾ ಪಡೆಗಳು ಆ ಯುವಕರನ್ನು ಪತ್ತೆ ಹಚ್ಚಿ, ರಕ್ಷಿಸಿದವು' ಎಂದು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries