HEALTH TIPS

ಅಕ್ರಮ ಬ್ಯಾನರ್ ಮತ್ತು ಧ್ವಜಗಳನ್ನು ಹಾಕುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು: ಆದೇಶ ಜಾರಿಗೊಳಿಸದವರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ: ಹೈಕೋರ್ಟ್


        ಕೊಚ್ಚಿ: ರಾಜ್ಯದ ರಸ್ತೆಗಳಲ್ಲಿ ಅಕ್ರಮವಾಗಿ ಬ್ಯಾನರ್ ಮತ್ತು ಧ್ವಜಗಳನ್ನು ಹಾಕುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಹೈಕೋರ್ಟ್ ಆದೇಶಿಸಿದೆ. ಆದೇಶವನ್ನು ಜಾರಿಗೊಳಿಸದ ಸ್ಥಳೀಯಾಡಳಿತ ಕಾರ್ಯದರ್ಶಿಗಳು ಮತ್ತು ಎಸ್‍ಎಚ್‍ಒಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
          ಈ ಹಿಂದೆ ರಸ್ತೆಗಳಲ್ಲಿ ಅಕ್ರಮವಾಗಿ ಬ್ಯಾನರ್, ಧ್ವಜಗಳನ್ನು ಅಳವಡಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ಸೂಚಿಸಿತ್ತು. ಆದರೆ, ಹಲವು ಬೋರ್ಡ್‍ಗಳನ್ನು ತೆರವು ಮಾಡದ ಕಾರಣ ಸ್ಥಳೀಯಾಡಳಿತ ಕಾರ್ಯದರ್ಶಿಗಳು, ಎಸ್‍ಎಚ್‍ಒಗಳು ಮತ್ತು ನೌಕರರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ತಿಳಿಸಿದ್ದಾರೆ.
       ಅಕ್ರಮ ಬೋರ್ಡ್‍ಗಳನ್ನು ಸ್ಥಾಪಿಸಿದವರ ವಿರುದ್ಧ ಕ್ರಮಗಳ ವಿವರವನ್ನು ನ್ಯಾಯಾಲಯಕ್ಕೆ ತಿಳಿಸುವಂತೆಯೂ ಕೋರಲಾಗಿದೆ. ಇದೇ ವೇಳೆ ತಿರುವನಂತಪುರಂ ಮತ್ತು ತ್ರಿಶೂರ್‍ನಲ್ಲಿ ನಿರ್ಮಿಸಿರುವ ಅಕ್ರಮ ಬೋರ್ಡ್‍ಗಳನ್ನು ತೆಗೆದುಹಾಕಲಾಗಿದೆ ಎಂದು ಸ್ಥಳೀಯ ಕಾರ್ಯದರ್ಶಿಗಳು ಹೈಕೋರ್ಟ್‍ಗೆ ತಿಳಿಸಿದರು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries