HEALTH TIPS

ಮಾಲೆಗಾಂವ್‌ ಸ್ಫೋಟ ಪ್ರಕರಣ: ಬಿಡುಗಡೆ ಕೋರಿದ್ದ ಪುರೋಹಿತ್‌ ಅರ್ಜಿ ತಿರಸ್ಕೃತ

 

               ಮುಂಬೈ: ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಲೆಫ್ಟಿನೆಂಟ್‌ ಕರ್ನಲ್‌ ಪ್ರಸಾದ್ ಶ್ರೀಕಾಂತ್‌ ಪುರೋಹಿತ್‌ ಅವರು ಪ್ರಕರಣದಿಂದ ಬಿಡುಗಡೆಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿತು.

           ಪುರೋಹಿತ್‌ ಮತ್ತು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿ ಆರು ಜನರು ಈ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. 2008ರ ಸೆಪ್ಟೆಂಬರ್‌ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

                 ಈ ಪ್ರಕರಣದ ಎಲ್ಲ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಸಿಆರ್‌ಪಿಸಿಯ ಸಂಬಂಧಿಸಿದ ಸೆಕ್ಷನ್‌ ಅಡಿ ತಮ್ಮನ್ನು ಶಿಕ್ಷೆಗೊಳಪಡಿಸಲು ಅವಕಾಶವಿಲ್ಲ ಎಂದು ಪುರೋಹಿತ್‌ ಪ್ರತಿಪಾದಿಸಿದ್ದರು.

                   ಆದರೆ ನ್ಯಾಯಮೂರ್ತಿಗಳಾದ ಎ.ಎಸ್‌.ಗಡ್ಕರಿ ಮತ್ತು ಪ್ರಕಾಶ್‌ ನಾಯಕ್‌ ಅವರ ಪೀಠವು ಪುರೋಹಿತ್ ಅವರ ಮನವಿಯನ್ನು ತಿರಸ್ಕರಿಸಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries