HEALTH TIPS

ಮೂತ್ರ ವಿಸರ್ಜನೆ ಪ್ರಕರಣ: ಏರ್‌ ಇಂಡಿಯಾ ವಿರುದ್ಧ ನಿವೃತ್ತ ಪೈಲಟ್‌ಗಳ ಆಕ್ರೋಶ

 

        ನವದೆಹಲಿ : 'ವಿಮಾನದಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣದಲ್ಲಿ ವಿಮಾನದ ಕ್ಯಾಪ‍್ಟನ್‌ ಹಾಗೂ ಕೆಲ ಸಿಬ್ಬಂದಿಯನ್ನು ಬಲಿಪಶುಮಾಡಿರುವುದು ಸರಿಯಲ್ಲ' ಎಂದು ಅನುಭವಿ ಹಾಗೂ ನಿವೃತ್ತ ಪೈಲಟ್‌ಗಳು ಭಾನುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

         'ಘಟನೆ ಸಂಬಂಧ ವಿಮಾನದ ಪೈಲಟ್‌ ಹಾಗೂ ನಾಲ್ವರು ಕ್ಯಾಬಿನ್‌ ಸಿಬ್ಬಂದಿಗೆ ಶೋಕಾಸ್‌ ನೋಟಿಸ್ ಜಾರಿಗೊಳಿಸಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಇವರಿಗೆ ಯಾವುದೇ ಹೊಣೆ ವಹಿಸದಿರಲು ತೀರ್ಮಾನಿಸಲಾಗಿದೆ' ಎಂದು ಏರ್‌ ಇಂಡಿಯಾ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಕ್ಯಾಂಪ್‌ಬೆಲ್‌ ವಿಲ್ಸನ್‌ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದರು.

            'ಕ್ಯಾಪ್ಟನ್‌ ಮತ್ತು ಸಿಬ್ಬಂದಿ ತಪ್ಪಿತಸ್ಥರಾಗಿದ್ದರೆ ಅವರ ವಿರುದ್ಧ ಘಟನೆಯ ಮರುದಿನವೇ (ನ. 27) ಕ್ರಮ ಕೈಗೊಳ್ಳಬೇಕಿತ್ತು. ಆದರೆ ಏರ್‌ ಇಂಡಿಯಾವು ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಹಾಗೂ ಮುಜುಗರದಿಂದ ಪಾರಾಗುವ ಉದ್ದೇಶದಿಂದ ಈ ಪ್ರಕರಣದಲ್ಲಿ ಪೈಲಟ್‌ ಹಾಗೂ ಸಿಬ್ಬಂದಿಯನ್ನು ಬಲಿಪಶು ಮಾಡಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

                 'ವಿಮಾನವು ನಿಗದಿತ ಮಾರ್ಗದ ಸಂಚಾರ ಪೂರ್ಣಗೊಳಿಸಿದ ಬಳಿಕ ಅದರಲ್ಲಿರುವ ಸಿಬ್ಬಂದಿಯು ಪ್ರಯಾಣದ ವೇಳೆ ಕ್ಯಾಬಿನ್‌ನಲ್ಲಿ ಏನೆಲ್ಲಾ ಆಯಿತು ಎಂಬುದರ ಕುರಿತ ವರದಿಯೊಂದನ್ನು ಸಿದ್ಧಪಡಿಸಿ, ಪೈಲಟ್‌ ಸಹಿಯೊಂದಿಗೆ ಅದನ್ನು ಕ್ಯಾಬಿನ್‌ ಸಿಬ್ಬಂದಿ ಇಲಾಖೆಗೆ ಸಲ್ಲಿಸುವುದು ವಾಡಿಕೆ. ಅದನ್ನು ಕ್ಯಾಬಿನ್‌ ಸಿಬ್ಬಂದಿ ಇಲಾಖೆ ಹಾಗೂ ಏರ್‌ ಇಂಡಿಯಾವು ಸರಿಯಾಗಿ ಪರಿಶೀಲಿಸದೇ ವಿಮಾನದ ಕ್ಯಾಪ್ಟನ್‌ನನ್ನು ದೂಷಿಸುತ್ತಿರುವುದು ಏಕೆ. ಕ್ಯಾಪ್ಟನ್‌ಗೆ ಶೋಕಾಸ್‌ ನೋಟಿಸ್‌ ನೀಡಿರುವುದು ಹಾಸ್ಯಾಸ್ಪದ' ಎಂದು ನಿವೃತ್ತ ಪೈಲಟ್‌ ಎಸ್‌.ಎಸ್‌.ಪನೇಸರ್‌ ಕಿಡಿಕಾರಿದ್ದಾರೆ.

            'ಪೈಲಟ್‌ ಹಾಗೂ ಸಿಬ್ಬಂದಿಯನ್ನು ಹೊಣೆಯಾಗಿಸುವ ಬದಲು ಬೇಜವಾಬ್ದಾರಿಯಿಂದ ನಡೆದುಕೊಂಡಿರುವ ಉನ್ನತ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿ' ಎಂದು ಒತ್ತಾಯಿಸಿದ್ದಾರೆ.

               'ಸಿಬ್ಬಂದಿಯು ವರದಿ ಸಲ್ಲಿಸಿದ ಬಳಿಕ ಏರ್‌ ಇಂಡಿಯಾ ಆಡಳಿತವು ಜಾಗೃತವಾಗಬೇಕಿತ್ತು. ವರದಿಯು ಅಸ್ಪಷ್ಟವಾಗಿದ್ದರೆ ಸಿಬ್ಬಂದಿಯಿಂದ ಮತ್ತಷ್ಟು ಮಾಹಿತಿ ಕೇಳಬೇಕಿತ್ತು. ಈ ಪ್ರಕರಣವನ್ನು ಮಾಧ್ಯಮಗಳು ದೊಡ್ಡದಾಗಿ ಬಿಂಬಿಸಿದ ಬಳಿಕ ಎಚ್ಚೆತ್ತುಕೊಂಡಿರುವ ಆಡಳಿತವು ಘಟನೆಗೆ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡಲು ಮುಂದಾಗಿರುವುದು ಸರಿಯಲ್ಲ' ಎಂದು ಕ್ಯಾಪ್ಟನ್‌ ಅಜಯ್‌ ಅಹ್ಲಾವತ್‌ ಟೀಕಿಸಿದ್ದಾರೆ.

                ಕಳೆದ ವರ್ಷದ ನವೆಂಬರ್ 26ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಿರಿಯ ಮಹಿಳೆಯ ಮೇಲೆ ಮದ್ಯದ ಅಮಲಿನಲ್ಲಿದ್ದ ಆರೋಪಿ ಶಂಕರ್‌ ಮಿಶ್ರಾ ಎಂಬಾತ ಮೂತ್ರ ವಿಸರ್ಜನೆ ಮಾಡಿದ್ದ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries