HEALTH TIPS

ಕೋವಿಡ್ ಲಸಿಕೆಯಿಂದ ಭಾರತದಲ್ಲಿ 34 ಲಕ್ಷ ಜನರ ಜೀವ ರಕ್ಷಣೆ: ಸ್ಟ್ಯಾನ್‌ಫೋರ್ಡ್‌ ವಿವಿ ಅಧ್ಯಯನ

 

         ನವದೆಹಲಿ: ಕರೊನಾ ಸಾಂಕ್ರಾಮಿಕ ಕಾಯಿಲೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿತ್ತು. ಆರಂಭದಲ್ಲಿ ಚೀನಾ ದೇಶದಲ್ಲಿ ಕಾಣಿಸಿಕೊಂಡಿದ್ದ ಈ ಸೋಂಕು ಅಟ್ಟಹಾಸ ಮೆರೆದು ಸಾವಿರಾರು ಜನರ ಸಾವಿಗೆ ಕಾರಣವಾಗಿದೆ. ಇಡೀ ಜಗತ್ತಿಗೆ ಹೋಲಿಸಿದರೆ ಭಾರತದಲ್ಲಿ ಕರೊನಾ ಆಪತ್ತು ದೊಡ್ಡಮಟ್ಟದಲ್ಲಿ ಉಂಟಾಗಿಲ್ಲ ಎಂದು ಈ ಅಧ್ಯಯನ ಹೇಳಿದೆ.

              ಕರೋನಾ ಸಮಯದಲ್ಲಿ ಜನರ ಜೀವ ಉಳಿಸಲು ಭಾರತದಲ್ಲಿ ಲಸಿಕಾ ಅಭಿಯಾನ ಆರಂಭಿಸಿದ್ದು, ಇದರಿಂದಾಗಿ 34 ಲಕ್ಷ ಜನರ ಜೀವನ ಉಳಿದಿದೆ ಎಂದು ಸ್ಟ್ಯಾನ್‌ಫೋರ್ಡ್ ವಿವಿ ನಡೆಸಿದ ಅಧ್ಯಯನದಲ್ಲಿ ವಿಷಯ ಹೊರಬಂದಿದೆ.

                   ಸ್ಟ್ಯಾನ್‌ಫೋರ್ಡ್‌ ವಿವಿ ನಡೆಸಿದ ಅಧ್ಯಯನದಲ್ಲಿ ಈ ವಿಷಯ ಬಹಿರಂಗವಾಗಿದ್ದು, ಭಾರತ ದೇಶದಲ್ಲಿ ಕೋವಿಡ್ ಲಸಿಕಾ ಅಭಿಯಾನ ನಡೆಸಿದೆ. ಈ ಪರಿಣಾಮ ಭಾರತದಲ್ಲಿ 18.3 ಬಿಲಿಯನ್ ಅಮೆರಿಕ ಡಾಲರ್ ಮೌಲ್ಯದ ಆರ್ಥಿಕ ಕುಸಿತ ತಡೆಗಟ್ಟಲು ಸಾಧ್ಯವಾಗಿದೆ ಎಂದು ಅಧ್ಯಯನ ತಿಳಿಸಿದೆ.

                    ಕೋವಿಡ್ ಕಾಲದಲ್ಲಿ ಆದ ವಿದ್ಯಮಾನಗಳ ಬಗ್ಗೆಯೂ ಅಧ್ಯಯನ ಮಾಡಲಾಗಿದೆ. ಕೋವಿಡ್ 19 ಆಗ ತಾನೆ ಶುರುವಾಗುತ್ತಿದ್ದಾಗ ಜನವರಿ 2020ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ತುರ್ತು ಪರಿಸ್ಥಿತಿಯನ್ನು ವಿಶ್ವಾದ್ಯಂತ ಘೋಷಣೆ ಮಾಡಿತು. ಈ ವೇಳೆ ಕೊರೊನಾ ವಿರುದ್ಧ ಸಮರ ಸಾರಿದ ವಿಶ್ವವು, ಕೋವಿಡ್‌ನಿಂದ ಎದುರಾಗಬಹುದಾದ ಹಲವು ರೀತಿಯ ಆರ್ಥಿಕ, ವೈದ್ಯಕೀಯ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಲ್ಲಲು ವಿಶ್ವದ ಎಲ್ಲಾ ರಾಷ್ಟ್ರಗಳೂ ತಮ್ಮದೇ ಆದ ರೀತಿಯಲ್ಲಿ ಕಾರ್ಯತಂತ್ರ ರೂಪಿಸಿದವು. ಈ ಪೈಕಿ ಭಾರತದ ಕಾರ್ಯತಂತ್ರ ಫಲ ನೀಡಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries