HEALTH TIPS

ರಸ್ತೆಗಳ ಸ್ಥಿತಿಯ ಬಗ್ಗೆ ಸರ್ಕಾರ ನ್ಯಾಯಾಲಯಕ್ಕೆ ಯಾಕೆ ಉತ್ತರ ನೀಡುತ್ತಿಲ್ಲ? ಯಾರ ತಪ್ಪು?: ಹೈಕೋರ್ಟ್


              ಕೊಚ್ಚಿ: ರಸ್ತೆಗಳ ದುರವಸ್ಥೆಯ ಬಗ್ಗೆ ಸರ್ಕಾರ ನ್ಯಾಯಾಲಯಕ್ಕೆ ಯಾವ ಮಾಹಿತಿಯನ್ನೂ ಯಾಕೆ ನೀಡುತ್ತಿಲ್ಲ?. ರಸ್ತೆಯ ಗುಂಡಿಗೆ ಬಿದ್ದು ಜನರು ಸಾವನ್ನಪ್ಪುವ ಘಟನೆ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಏಕೆ ಎಂದು ನ್ಯಾಯಾಲಯ ಕೇಳಿದೆ.
           ರಸ್ತೆ ಗುಂಡಿ ಮುಚ್ಚುವ ಕುರಿತು ಪದೇ ಪದೇ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ದೇವನರಾಮಚಂದ್ರನ್ ಹೇಳಿದರು. ರಸ್ತೆಯ ಲೋಪದೋಷಗಳನ್ನು ಸರಿಪಡಿಸದಿರುವ ಕುರಿತು ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಿ ಈ ವಿಷಯ ತಿಳಿಸಲಾಯಿತು.
          ರಸ್ತೆಯಲ್ಲಿನ ಲೋಪದೋಷಗಳನ್ನು ಪರಿಹರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಹಲವು ಬಾರಿ ಸರಕಾರ ಮತ್ತು ಸ್ಥಳೀಯ ಸಂಸ್ಥೆಗಳಿಂದ ವರದಿ ಕೇಳಿದೆ. ಇನ್ನೂ ಆದೇಶ ಹೊರಡಿಸಿದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ದುರಹಂಕಾರಿಗಳು ಮತ್ತು ದುರಾಡಳಿತ ಮನೋಭಾವವಿದೆ.  ಸರ್ಕಾರ ಏನೂ ಮಾಡುತ್ತಿಲ್ಲ ಎಂಬುದು ವೇದ್ಯವಾಗುತ್ತಿದೆ.
          ರಸ್ತೆಗಳ ದುಸ್ಥಿತಿಯ ಬಗ್ಗೆ ನ್ಯಾಯಾಲಯವಾಗಲಿ, ಸರಕಾರವಾಗಲಿ ಚಿಂತಿಸಬೇಕು. ಯಾರ ತಪ್ಪಿನಿಂದಾಗಿ ಎಂಜಿ ರಸ್ತೆಯಲ್ಲಿ ಗುಂಡಿ ಬಿದ್ದಿದೆ, ಜಿಲ್ಲಾಧಿಕಾರಿ ಏನು ಮಾಡಿದ್ದಾರೆ, ಏನು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲು ಸಾಧ್ಯವೇ ಎಂದು ನ್ಯಾಯಾಲಯ ಪ್ರಶ್ನಿಸಿದೆ.
          ಪ್ರಾಣ ಹೋದರೂ ಯಾರಿಗೂ ಸಮಸ್ಯೆ ಇಲ್ಲ. ಇತರ ದೇಶಗಳಲ್ಲಿ, ಸರ್ಕಾರವು ಪರಿಹಾರವನ್ನು ನೀಡುತ್ತದೆ. ಇಲ್ಲಿ ರಿಬ್ಬನ್ ಕಟ್ಟಿಕೊಂಡು ಹೊಂಡ ಮರೆಸಲು ಯತ್ನಿಸುತ್ತಿದ್ದಾರೆ. ಅಧಿಕಾರಿಗಳಿಗೆ ಎಂತಹ ದುರಹಂಕಾರÀ. ಈ ಬಗ್ಗೆ ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅಧಿಕಾರಿಗಳ ನಿರ್ಲಕ್ಷ್ಯ ತಾಂಡವವಾಡುತ್ತಿದೆ. ಜಿಲ್ಲಾಧಿಕಾರಿ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ. ಈ ಪ್ರಕರಣ ಗುರುವಾರ ಮತ್ತೆ ವಿಚಾರಣೆಗೆ ಬರಲಿದೆ.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries