HEALTH TIPS

ಪೂರೈಕೆಯಾಗದ ಕುಡಿನೀರು: ಸ್ಪಂಧಿಸದ ಜಿಲ್ಲಾಧಿಕಾರಿಗೆ: ಗಂಭೀರ ವಿಚಾರ ಎಂದ ಹೈಕೋರ್ಟ್


                     ಕೊಚ್ಚಿ: ಕುಡಿಯುವ ನೀರಿನ ಅಲಭ್ಯತೆ ಗಂಭೀರ ವಿಚಾರವಾಗಿದ್ದು, ಜಲ ಪ್ರಾಧಿಕಾರವು ತುರ್ತು ಮಧ್ಯಸ್ಥಿಕೆ ವಹಿಸುವಂತೆ ಹೈಕೋರ್ಟ್ ಸೂಚಿಸಿದೆ.
            ನೀರು ಪೂರೈಕೆ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ನೆಟ್ಟೂರಿನ ನಿವಾಸಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪರಿಗಣಿಸಿ ಈ ಸೂಚನೆ ನೀಡಿದೆ.
          ಮಂಗಳವಾರ ಮುಂಜಾನೆ ತಮ್ಮನಟದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ರಸ್ತೆಗೆ ನೀರು ನುಗ್ಗಿ ಆ ಭಾಗದ ಅಂಗಡಿ, ಮುಂಗಟ್ಟುಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಹೈಕೋರ್ಟ್ ಮಧ್ಯಪ್ರವೇಶ ಮಾಡಿತು. ಕುಡಿಯುವ ನೀರಿನ ಸಮಸ್ಯೆ ಗಂಭೀರ ಸಮಸ್ಯೆಯಾಗಿದ್ದು, ಗುರುವಾರ ಅರ್ಜಿಯನ್ನು ಮತ್ತೊಮ್ಮೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ.
           ಒಂದೂವರೆ ತಿಂಗಳಿನಿಂದ ಈ ಭಾಗದಲ್ಲಿ ಕುಡಿಯುವ ನೀರು ಸಿಗುತ್ತಿಲ್ಲ ಎಂದು ನೆಟ್ಟೂರು ನಿವಾಸಿಗಳ ಮನವಿಯಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಏತನ್ಮಧ್ಯೆ, ತಮ್ಮನಂನಲ್ಲಿ ಕುಡಿಯುವ ನೀರಿನ ಪೈಪ್‍ಲೈನ್ ಒಡೆದ ಕಾರಣ, ಕೊಚ್ಚಿಯ ವೆನ್ನಾಲ, ಪಲರಿವಟ್ಟಂ, ಕರಣಕೊಡಂ ಮತ್ತು ತಮ್ಮನಂ ಪ್ರದೇಶಗಳಿಗೆ ಎರಡು ದಿನಗಳ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ತಿಳಿಸಲಾಗಿದೆ.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries