ಕಾಸರಗೋಡು: ಕೇರಳ ರಾಜ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ ಹಾಗೂ ಸಂಘಟನೆ ರಜತಮಹೋತ್ಸವ ಸಮಾರಂಭ ಫೆ. 24 ಮತ್ತು 25ರಂದು ಕಾಸರಗೋಡು ನಗರಸಭಾಂಗಣದಲ್ಲಿ ಜರುಗಲಿದೆ.
24ರಂದು ಬೆಳಗ್ಗೆ 10ಕ್ಕೆ ಕಾಸರಗೋಡು ಬೀರಂತಬೈಲಿನ ಕನ್ನಡ ಮಾಧ್ಯಮ ಅಧ್ಯಾಪಕರ ಭವನದಿಂದ ನಗರಸಭಾಂಗಣ ವರೆಗೆ ಅಧ್ಯಾಪಕರನ್ನೊಳಗೊಂಡ ಮೆರವಣಿಗೆ ಆರಂಭಗೊಳ್ಳಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮ್ಮೇಳನ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ ಅಧ್ಯಕ್ಷತೆ ವಹಿಸುವರು. ಸಂಘದ ಅಧಿಕೃತ ವಕ್ತಾರ ರವೀಂದ್ರನಾಥ ಕೆ.ಆರ್ ಪ್ರಾಸ್ತಾವಿಕ ಮಾತುಗಳನ್ನಾಡುವರು. ಸಂಸದ ರಾಜ್ಮೋಹನ್ ಉಣ್ಣಿತ್ತಾನ್, ಶಾಸಕರಾದ ಸಿ.ಎಚ್. ಕುಞಂಬು, ಎನ್.ಎ ನೆಲ್ಲಿಕುನ್ನು, ಎ.ಕೆ.ಎಂ ಅಶ್ರಫ್ ಅತಿಥಿಗಳಾಗಿ ಭಾಗವಹಿಸುವರು. ಖ್ಯಾತ ಚಿಂತಕ, ವಿಮರ್ಶಕ ಅರವಿಂದ ಚೊಕ್ಕಾಡಿ ಮುಖ್ಯ ಭಾಷಣ ಮಾಡುವರು.
ಮಧ್ಯಾಃನ2ರಿಂದ ಶಶಿರಾಜ್ ಕಾವೂರು ರಚಿಸಿರುವ ಬರ್ಬರೀಕ ನಾಟಕ ಪ್ರದರ್ಶನಗೊಳ್ಳಲಿದೆ. 3ರಿಂದ ಪ್ರತಿನಿಧಿ ಸಮ್ಮೇಳನ ನಡೆಯುವುದು. ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ ಅಧ್ಯಕ್ಷತೆ ವಹಿಸುವರು. ಸಂಜೆ 4ರಿಂದ ಅಧ್ಯಾಪಕರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯುವುದು. 25ರಂದು ಬೆಳಗ್ಗೆ 10ಕ್ಕೆ ಸಂಘದ ರಜತಮಹೋತ್ಸವ ಸಮಾರಂಭವನ್ನು ಉದ್ಯಮಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸುವರು. ಶ್ರೀನಿವಾಸ ರಾವ್ ಪಿ.ಬಿ ಅಧ್ಯಕ್ಷತೆ ವಹಿಸುವರು. ಖ್ಯಾತ ಅಂಕಣಕಾರ ನರೇಂದ್ರ ರಐ ದೇರ್ಲ ಮುಖ್ಯ ಭಾಷಣ ಮಾಡುವರು. ಈ ಸಂದರ್ಭ ಸಂಘಟನೆಯ ನಿವೃತ್ತ ಪರಾಧಿಕಾರಿಗಳಿಗೆ ಗೌರವಾರ್ಪಣೆ ನಡೆಯುವುದು. 11.30ರಿಂದ ವಿಚಾರ ಗೋಷ್ಠಿ, ಮಧ್ಯಾಹ್ನ 2ರಿಂದ ಯಕ್ಷಗಾನ ಬಯಲಾಟ, 3ಕ್ಕೆ ಸಮಾರೋಪ ಸಮಾರಂಭ ನಡೆಯುವುದು. ಕಾಸರಗೋಡು ನಗರಸಭಾ ಅಧ್ಯಕ್ಷ ವಕೀಲ ವಿ.ಎಂ ಮುನೀರ್ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ ಅಧ್ಯಕ್ಷತೆ ವಹಿಸುವರು. ಬಹುಭಾಷಾ ನಟ ಪೃಥ್ವೀ ಅಂಬಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಇಂದಿನಿಂದ ಕೇರಳ ರಾಜ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ, ರಜತಮಹೋತ್ಸವ ಸಮಾರಂಭ
0
February 23, 2023
Tags