HEALTH TIPS

ಕನ್ನಡ ಅಧ್ಯಾಪಕ ಸಂಘದ ರಾಜ್ಯ ಸಮ್ಮೇಳನ ಹಾಗೂ ರಜತ ಮಹೋತ್ಸವ ; ಆಮಂತ್ರಣ ಪತ್ರಿಕೆ ಹಾಗೂ ಪೋಸ್ಟರ್ ಬಿಡುಗಡೆ


         ಕಾಸರಗೋಡು : ಕಾಸರಗೋಡಿನ ಕನ್ನಡ ಅಧ್ಯಾಪಕರ ಅತೀ ದೊಡ್ಡ ಸಂಘಟನೆಯಾದ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘವು 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಸಮ್ಮೇಳನ ಹಾಗೂ ರಜತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಂಗವಾಗಿ ಆಮಂತ್ರಣ ಪತ್ರಿಕೆ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಉಪ್ಪಳದಲ್ಲಿ ನಡೆಯಿತು.  



        ಆಮಂತ್ರಣ ಪತ್ರಿಕೆಯನ್ನು ಸಂಘಟನೆಯ ಸಕ್ರಿಯ ಕಾರ್ಯಕರ್ತೆಯಾಗಿದ್ದ ನಿವೃತ್ತ ಶಿಕ್ಷಕಿ, ಗೈಡ್ ನ ಜಿಲ್ಲಾ ಕಮಿಷನರ್ ಆಗಿರುವ ಶ್ರೀಕುಮಾರಿ ಬಿಡುಗಡೆಗೊಳಿಸಿದರು. ಪೋಸ್ಟರ್ ನ್ನು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀನಿವಾಸ ರಾವ್ ಪಿ. ಬಿ ರವರು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಯವರಿಗೆ ಹಸ್ತಾಂತರಿಸುವ ಮೂಲಕ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ, ಸದಸ್ಯೆ ಸುನಿತಾ, ಮಂಜೇಶ್ವರÀ ಉಪಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್ ಕೆ,  ಕಾರ್ಯದರ್ಶಿ ಕವಿತಾ ಕೂಡ್ಲು, ಕೋಶಾಧಿಕಾರಿ ಜೀವನ್ ಕುಮಾರ್, ಸದಸ್ಯರಾದ ದಯಾವತಿ ಸಾಲ್ಯಾನ್, ಪುಷ್ಪಲತ, ಮಾಲತಿ, ಜಯಶ್ರೀ ಉಪಸ್ಥಿತರಿದ್ದರು.
        ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ ಹಾಗೂ ರಜತ ಮಹೋತ್ಸವ ಕಾರ್ಯಕ್ರಮ ಫೆ. 24 ಮತ್ತು 25 ರಂದು ಕಾಸರಗೋಡು ನಗರಸಭಾ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕರೆ ನೀಡಲಾಗಿದೆ.


 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries