ಮಂಜೇಶ್ವರ: ಮಜಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಇತ್ತೀಚೆಗೆ ಜರಗಿತು. ಗ್ರಾಮ ಪಂಚಾಯತಿ ಸದಸ್ಯೆ ಆಶಾಲತಾ ಬಿ.ಎಂ ಶಾಲಾ ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲಾ ಮಕ್ಕಳ ಪ್ರಾರ್ಥನೆ ಹಾಗೂ ಸ್ವಾಗತ ನೃತ್ಯದೊಂದಿಗೆ ಆರಂಭಗೊಂಡ ಸಭಾ ಕಾರ್ಯಕ್ರಮವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ.ಆರ್.ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಪಿ.ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಮೀಂಜ ಪಂಚಾಯತಿ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ, ಅಭಿವೃದ್ಧಿ ಸ್ಥಾಯೀ ಸಮಿತಿಯ ಅಧ್ಯಕ್ಷೆ ಋಖಿಯಾ ಸಿದ್ಧೀಕ್, ಸದಸ್ಯೆ ಆಶಾಲತಾ ಬಿ.ಎಂ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ ವಿ, ಬ್ಲಾಕ್ ಕಾರ್ಯನಿರೂಪಣಾಧಿಕಾರಿ ವಿಜಯಕುಮಾರ್ ಪಿ., ಮಜಿಬೈಲು ವಾರ್ಡಿನ ಮಾಜಿ ಸದಸ್ಯ ಶಾಂತರಾಮ ಶೆಟ್ಟಿ, ಮಜಿಬೈಲು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂಜೀವ ಶೆಟ್ಟಿ, ನ್ಯಾಯವಾದಿ ದಾಮೋದರ ಶೆಟ್ಟಿ, ಮಜಿಬೈಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ನಾವಡ, ಹಿರಿಯರಾದ ಮಜಿಬೈಲು ಕೊಡ್ಡೆಯ ಗೋಪಾಲಕೃಷ್ಣ ಆಳ್ವ, ಸೈಂಟ್ ಮೈಕಲ್ ವಾರ್ಡಿನ ಗುರಿಕಾರ ಫೆಡ್ರಿಕ್ಸ್ ಡಿ.ಸೋಜ, ಮಜಿಬೈಲು ಶ್ರೀಅಯ್ಯಪ್ಪ ಭಜನಾ ಮಂದಿರದÀ ಅಧ್ಯಕ್ಷ ಸಂಜೀವ ಬಂಗೇರ ಮಜಿಬೈಲು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ನಾಯಕ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಮಜಿಬೈಲು, ಎಸ್.ಎಂ.ಸಿ ಅಧ್ಯಕ್ಷೆ ಆಶಾಲತಾ ಆಳ್ವ, ಮಾತೃಸಂಘದ ಅಧ್ಯಕ್ಷೆ ಪವಿತ್ರ, ನಿವೃತ್ತ ಉಪಜಿಲ್ಲಾ ವಿದ್ಯಾಧಿಕಾರಿ ಎಂ.ಜಿ ನಾರಾಯಣ ರಾವ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಪಾಡಿ ವಲಯ ಮೇಲ್ವಿಚಾರಕ ಭಾಸ್ಕರ್ ಕಾನಾವು ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿಗಾಗಿ ಶ್ರಮಿಸಿದ ಹಿರಿಯರನ್ನು ಹಾಗೂ ವಾರ್ಡ್ ಸದಸ್ಯರನ್ನು ಶಾಸಕರ ಸಮ್ಮುಖದಲ್ಲಿ ಗೌರವಿಸಲಾಯಿತು. ಮುಖ್ಯೋಪಾಧ್ಯಾಯ ಸುರೇಶ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಿಕ್ಷಕಿ ಅಶ್ವಿನಿ ಶಾಲಾ ವರದಿ ಮಂಡಿಸಿದರು. ಅಧ್ಯಾಪಕ ದೇವಾನಂದ ಕಾಡೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಬಳಿಕ ಶಾಲಾ ಮಕ್ಕಳಿಂದ, ಹಳೆ ವಿದ್ಯಾರ್ಥಿಗಳಿಂದ ಹಾಗೂ ಊರ ವಿದ್ಯಾಭಿಮಾನಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಶರತ್ ಕೊಡ್ಡೆಯವರ ಸಂಗೀತದೊಂದಿಗಿನ ಚಿತ್ರ ಕಾರ್ಯಕ್ರಮವು ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಮೆರುಗು ನೀಡಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಅಭಿನಯಿಸಿದ 'ಯೋಧ ' ಎಂಬ ನಾಟಕವು ಎಲ್ಲರ ಮೆಚ್ಚುಗೆಗಳಿಸಿತು. ಶಿಕ್ಷಕಿ ಮಮತಾ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಮಜಿಬೈಲು ಶಾಲಾ ಸುವರ್ಣ ಮಹೋತ್ಸವ
0
February 01, 2023
Tags