HEALTH TIPS

ಪಕ್ಷಗಳ ಹುಸಿ ಭರವಸೆ: ಮತದಾರರಿಗೆ ಮಾಡಿದ ಅವಮಾನ- ಬಿಜೆಪಿ ಸಂಸದ ವರುಣ್‌ ಗಾಂಧಿ

 

          ನವದೆಹಲಿ: 'ಎಲ್ಲಾ ರಾಜಕೀಯ ಪಕ್ಷಗಳು ಮತದಾರರಿಗೆ ಹುಟ್ಟಿನಿಂದ ಸಾವಿನವರೆಗೂ ಉಚಿತ ಕೊಡುಗೆ ನೀಡಲು ಮುಂದಾಗಿವೆ' ಎಂದು ಬಿಜೆಪಿ ಸಂಸದ ವರುಣ್‌ ಗಾಂಧಿ ಹೇಳಿದ್ದಾರೆ.

             ತಮ್ಮ ಹೊಸ ಪುಸ್ತಕ 'ದಿ ಇಂಡಿಯನ್‌ ಮೆಟ್ರೊಪೊಲಿಸ್‌' ಕುರಿತು ಬುಧವಾರ ಮಾತನಾಡಿದ ಅವರು, 'ಉಚಿತ ಕೊಡುಗೆಗಳ ಮೂಲಕ ಸಾರ್ವಜನಿಕರ ಹಣ ಪೋಲು ಮಾಡಲಾಗುತ್ತಿದೆ.

ಈ ಕುರಿತು ಗಂಭೀರ ಚರ್ಚೆಯಾಗಬೇಕು' ಎಂದಿದ್ದಾರೆ.

                 'ರಾಜಕೀಯ ಪಕ್ಷಗಳು ಚುನಾವಣೆ ವೇಳೆ ಹಲವು ಭರವಸೆಗಳನ್ನು ನೀಡುತ್ತವೆ. ಈ ಪೈಕಿ ಕೆಲವು ಈಡೇರುವುದೇ ಇಲ್ಲ. ಇಂತಹ ಹುಸಿ ಭರವಸೆಗಳನ್ನು ನೀಡುವುದು ಮತದಾರರಿಗೆ ಮಾಡಿದ ಅವಮಾನ' ಎಂದು ತಿಳಿಸಿದ್ದಾರೆ.

                'ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾಗುವ ಎಲ್ಲಾ ಯೋಜನೆಗಳನ್ನೂ ಉಚಿತ ಕೊಡುಗೆ ಎಂದು ಹೇಳಲಾಗದು. ಬಿಸಿಯೂಟ ಯೋಜನೆಯ ಅಡಿಯಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಊಟ ನೀಡಲಾಗುತ್ತಿದೆ. ಇದು ಮಕ್ಕಳ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ. ಇದನ್ನು ಉಚಿತ ಕೊಡುಗೆ ಎಂದು ಹೇಳಲು ಆಗುವುದಿಲ್ಲ' ಎಂದು ಹೇಳಿದ್ದಾರೆ.

                 'ಉಚಿತ ಕೊಡುಗೆಗಳನ್ನು ಪ್ರಕಟಿಸುವ ಸರ್ಕಾರಗಳು (ಕೇಂದ್ರ ಅಥವಾ ರಾಜ್ಯ) ಅದಕ್ಕೆ ಅಗತ್ಯವಿರುವ ಹಣಕಾಸಿನ ನೆರವಿನ ಯೋಜನೆಗಳನ್ನೂ ಘೋಷಿಸಬೇಕು. ಮುಂಗಡಪತ್ರವನ್ನು ಕಾರ್ಯಗತಗೊಳಿಸುವ ಇಚ್ಛಾಶಕ್ತಿಯನ್ನೂ ತೋರಬೇಕು' ಎಂದು ಸಲಹೆ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries