HEALTH TIPS

ಸಿಪಿಕೆ, ಬಾಬು ಕೃಷ್ಣಮೂರ್ತಿ, ಎಸ್.ಆರ್.ರಾಮಸ್ವಾಮಿಗೆ ಪಂಪ ಪ್ರಶಸ್ತಿ

 

                 ಬೆಂಗಳೂರು: ಸಾಹಿತಿಗಳಾದ ಸಿ.ಪಿ. ಕೃಷ್ಣಕುಮಾರ್, ಡಾ.ಬಾಬು ಕೃಷ್ಣಮೂರ್ತಿ ಮತ್ತು ಡಾ.ಎಸ್.ಆರ್.ರಾಮಸ್ವಾಮಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ 'ಪಂಪ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

                         2020-21, 2021-22 ಮತ್ತು 2022-23ನೇ ಸಾಲಿನ 'ಪಂಪ' ಪ್ರಶಸ್ತಿ ಪುರಸ್ಕೃತರ ಆಯ್ಕೆಗಾಗಿ ಡಾ.ಜಿ.ಬಿ.ಹರೀಶ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು.

                  ಸಮಿತಿಯ ಶಿಫಾರಸಿನಂತೆ 2020-21ನೇ ಸಾಲಿಗೆ ಸಿ.ಪಿ.‌ಕೃಷ್ಣಕುಮಾರ್, 2021-22ನೇ ಸಾಲಿಗೆ ಬಾಬು ಕೃಷ್ಣಮೂರ್ತಿ ಮತ್ತು 2022-23ನೇ ಸಾಲಿನ ಪ್ರಶಸ್ತಿಗೆ ಎಸ್.ಆರ್.‌ರಾಮಸ್ವಾಮಿ ಅವರನ್ನು ಆಯ್ಕೆಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

                  ಪ್ರಶಸ್ತಿಯು ₹ 5 ಲಕ್ಷ ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

             ಕುವೆಂಪು, ಶಿವರಾಮ ಕಾರಂತ, ಪುತಿನ, ಕೆ.ಎಸ್.ನರಸಿಂಹಸ್ವಾಮಿ, ಪೂರ್ಣಚಂದ್ರ ತೇಜಸ್ವಿ, ಎಸ್.ಎಲ್‌.ಭೈರಪ್ಪ, ನಿಸಾರ್ ಅಹ್ಮದ್, ಸಿದ್ದಲಿಂಗಯ್ಯ ಸೇರಿದಂತೆ 33 ಸಾಹಿತಿಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೂರು ಲಕ್ಷ ನಗದು ಒಳಗೊಂಡ ಈ ಪ್ರಶಸ್ತಿಯನ್ನು ಸರ್ಕಾರ ಕೊಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries