HEALTH TIPS

ಅದಾನಿ ಪ್ರಕರಣ: ಪ್ರಧಾನಿ ಮೌನವೇಕೆ -ಕಾಂಗ್ರೆಸ್‌ ಪ್ರಶ್ನೆ

 

         ನವದೆಹಲಿ : ಅದಾನಿ ಪ್ರಕರಣದಲ್ಲಿ ಪ್ರಧಾನಿ ಮೋದಿ ಅವರು ಮೌನ ತಳೆದಿರುವುದೇಕೆ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಇದು ತನ್ನ ಆಪ್ತರಿಗೆ ನೆರವಾಗಲು 'ಮನ್‌ ಕೀ ಬ್ಯಾಂಕಿಂಗ್‌'ಗೆ ನಿದರ್ಶನವೇ ಎಂದು ವ್ಯಂಗ್ಯವಾಡಿದೆ.

               'ಇನ್ನಾದರೂ ಮೌನ ಮುರಿಯಿರಿ ಪ್ರಧಾನಿಗಳೇ' ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಹೇಳಿದ್ದಾರೆ.

                 ಭಾನುವಾರದಿಂದ ಸಂಬಂಧ ನಿತ್ಯ ಪ್ರಶ್ನೆಗಳನ್ನು ಕೇಳಲಾಗುವುದು ಎಂದು ಹೇಳಿದ್ದೆವು. ಸೋಮವಾರದ ಪ್ರಶ್ನೆ ಹೀಗಿದೆ. 'ಹಮ್‌ ಅದಾನಿ ಕೇ ಹೈ ಕೌನ್‌. ದಯವಿಟ್ಟು ಮಾತನಾಡಿ' ಎಂದಿದ್ದಾರೆ.

              ಐಡಿಬಿಐ ಬ್ಯಾಂಕ್‌, ನ್ಯೂ ಇಂಡಿಯಾ ಅಶ್ಯೂರೆನ್ಸ್‌, ಜನರಲ್‌ ಇನ್ಸೂರೆನ್ಸ್ ಕಾರ್ಪೋರೇಷನ್‌ನ ಬಂಡವಾಳ ಹಿಂತೆಗೆತ ವಿಫಲವಾದ ಬಳಿಕ ಎಲ್‌ಐಸಿ ನಿಧಿಯನ್ನು ಬಳಸಿಕೊಂಡು ಅದನ್ನು ಮರೆಮಾಚುವ ದಾಖಲೆಯೇ ಸರ್ಕಾರದ ಬೆನ್ನಿಗಿದೆ. ಹಾಗೇ 30 ಕೋಟಿ ಪಾಲಿಸಿದಾರರ ಮೊತ್ತವನ್ನು ಬಳಸಿಕೊಂಡು ನಿಮ್ಮ ಗೆಳೆಯರನ್ನು ಸಿರಿವಂತರಾಗಿಸುವ ಕಾರ್ಯಕ್ರಮವೇ? ಅಪಾಯ ಸಾಧ್ಯತೆ ಇದ್ದ ಅದಾನಿ ಸಮೂಹದಲ್ಲಿ ಎಲ್‌ಐಸಿ ಇಷ್ಟು ದೊಡ್ಡ ಪ್ರಮಾಣದ ಹೂಡಿಕೆ ಮಾಡುವುದು ಹೇಗೆ ಸಾಧ್ಯವಾಯಿತು ಎಂದು ಅವರು ಪ್ರಶ್ನಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries