HEALTH TIPS

ರಾಜ್ಯದಲ್ಲಿ ಎಚ್1ಎನ್1 ಪ್ರಕರಣಗಳಲ್ಲಿ ಹೆಚ್ಚಳ; ಮಲಪ್ಪುರಂನಲ್ಲಿ ಇಂದೂ ಮೂರು ಪ್ರಕರಣಗಳು ದೃಢ: ಡೆಂಗ್ಯೂ ಹೆಚ್ಚಳ


              ಮಲಪ್ಪುರಂ: ರಾಜ್ಯದಲ್ಲಿ ಎಚ್1ಎನ್1 ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. ನಿನ್ನೆ ಆರು ಮಂದಿಗೆ ಎಚ್1ಎನ್1 ದೃಢಪಟ್ಟಿತ್ತು.
            ಇದು ಇತ್ತೀಚಿನ ದಿನಗಳಲ್ಲಿ ಅತ್ಯಧಿಕ ಅಂಕಿ ಅಂಶವಾಗಿದೆ. ತಿರುವನಂತಪುರಂ, ಕೊಟ್ಟಾಯಂ, ಅಲಪ್ಪುಳ, ಎರ್ನಾಕುಳಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಪ್ರಕರಣಗಳು ದೃಢಪಟ್ಟಿವೆ.
           ಮಲಪ್ಪುರಂನಲ್ಲಿ ಇಂದು ಮತ್ತೆ ಮೂರು ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ದೃಢಪಟ್ಟಿರುವ ಹತ್ತು ಡೆಂಗ್ಯೂ ಪ್ರಕರಣಗಳಲ್ಲಿ ನಾಲ್ಕು ಎರ್ನಾಕುಳಂ ಜಿಲ್ಲೆಯಲ್ಲಿವೆ. ನಿನ್ನೆ ರಾಜ್ಯದಲ್ಲಿ 8487 ಮಂದಿ ಜ್ವರಕ್ಕೆ ಚಿಕಿತ್ಸೆ ಪಡೆದಿದ್ದಾರೆ. 108 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
       ಇದೇ ವೇಳೆ,  ದೇಶದಲ್ಲಿ ಎಚ್3ಎನ್2 ವೈರಸ್ ಹರಡುವುದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಕೇಂದ್ರವು ಮಾಹಿತಿ ನೀಡಿದೆ. ಕರ್ನಾಟಕ ಮತ್ತು ಹರಿಯಾಣದಲ್ಲಿ ಎಚ್ 3ಎನ್ 2 ನಿಂದ ಸಾವುಗಳು ಸಂಭವಿಸಿವೆ. ಇದುವರೆಗೆ 400ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಅಂದಾಜಿಸಲಾಗಿದೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries