HEALTH TIPS

ಕಂದಕಕ್ಕೆ ಉರುಳಿ ಬಿದ್ದ ಬಸ್, 62 ಮಂದಿ ಶಬರಿಮಲೆ ಯಾತ್ರಿಕರಿಗೆ ಗಾಯ

 

           ಪತ್ತನಂತಿಟ್ಟ: ಶಬರಿಮಲೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಮಂಗಳವಾರ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದಿದ್ದು, ಬಸ್‌ನಲ್ಲಿದ್ದ 62 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

                   ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದು ತಮಿಳುನಾಡಿಗೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

                  ಬಸ್‌ನಲ್ಲಿ ತಮಿಳುನಾಡಿನ ಮೈಲಾಡತುರೈ ಜಿಲ್ಲೆಯ ಒಂಬತ್ತು ಮಕ್ಕಳು ಸೇರಿದಂತೆ 64 ಯಾತ್ರಿಕರನ್ನು ಒಳಗೊಂಡಿದ್ದ ಬಸ್ ಮಧ್ಯಾಹ್ನ 1.30 ರ ಸುಮಾರಿಗೆ ನಿಲಕಲ್‌ ಬಳಿಯ ಎಲವುಂಕಲ್‌ನಲ್ಲಿ ರಸ್ತೆಯಿಂದ ಕಂದಕಕ್ಕೆ ಉರುಳಿದೆ.

                    ಯಾತ್ರಿಕರಲ್ಲಿ 62 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಪತ್ತನಂತಿಟ್ಟ ಮತ್ತು ಎರುಮೇಲಿಯ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries