ಮುಳ್ಳೇರಿಯ: ದೇಲಂಪಾಡಿ ಗ್ರಾಮ ಪಂಚಾಯಿತಿ ಅಡೂರಿನ ಕೊರತಿಮೂಲೆ ಬಾಲಕೃಷ್ಣ ತಂತ್ರಿಗಳ ಸ್ಮರಣಾರ್ಥ ನೀಡುವ 2022-23ರ ಸಾಲಿನ ವಿದ್ಯಾರ್ಥಿವೇತನವನ್ನು ಅಡೂರಿನ ವಿದ್ಯಾಭಾರತಿ ವಿದ್ಯಾಲಯದ ವಿದ್ಯಾರ್ಥಿನಿ ತೃಷಾ ಪಿ ಅವರಿಗೆ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಸಮಿತಿ ಅಧ್ಯಕ್ಷೆ ಸತ್ಯಪ್ರೇಮಾ ಎಂ ಭಾರಿತ್ತಾಯ, ಶಾಲಾ ಸಮಿತಿ ಉಪಾಧ್ಯಕ್ಷ ವೆಂಕಟ್ರಾಜ್, ಶಾಲಾ ಮುಖ್ಯ ಶಿಕ್ಷಕ ಅಪ್ಪಕುಂಞ ಮಾಸ್ತರ್, ಮಾತೃ ಸಂಘದ ಅಧ್ಯಕ್ಷೆ ರಮ್ಯಾ ಸಂಪತ್, ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಅಡೂರು, ಶಿಕ್ಷಕಿಯರಾದ ಶಾದದಾದೇವಿ, ಪ್ರೇಮಾವತಿ, ಇಂದಿರಾ,ಶೋಭಾ, ಮಿನಿ, ಭಾರತಿ, ಸಹಾಯಕಿ ರೇಖಾ ಮೊದಲಾದವರು ಭಾಗವಹಿಸಿದ್ದರು. ಬೈತನಡ್ಕ ಬಾಲಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
ಅಡೂರಿನಲ್ಲಿ ವಿದ್ಯಾರ್ಥಿವೇತನ ವಿತರಣೆ
0
March 06, 2023