HEALTH TIPS

ಕಾಸರಗೋಡು ತೆರುವತ್ ಶ್ರೀ ಚೀರುಂಬಾ ಭಗವತೀ ಕ್ಷೇತ್ರ ನಡಾವಳಿ ಮಹೋತ್ಸವಕ್ಕೆ ಚಾಲನೆ



            ಕಾಸರಗೋಡು: ತೆರುವತ್ ಶ್ರೀ ಚೀರುಂಬಾ ಭಗವತೀ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನಡಾವಳಿ ಮಹೋತ್ಸವ ಬುಧವಾರ ಆರಂಭಗೊಂಡಿತು. ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ಕೊರಕ್ಕೋಡು ಹೊನ್ನೆಮೂಲೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವಠಾರದಿಂದ ತೆರುವತ್ ಕ್ಷೇತ್ರಕ್ಕೆ ಹಸಿರುವಾಣಿ ಸಮರ್ಪಣಾ ಮೆರವಣಿಗೆ, ನಂತರ ಉಗ್ರಾಣ ಮುಹೂರ್ತ ನಡೆಯಿತು.
         9ರಂದು ಬೆಳಗ್ಗೆ 8.30ಕ್ಕೆ ಚಂಡಿಕಾ ಹೋಮ ನಡೆಯುವುದು. ಮಧ್ಯಾಹ್ನ 12.30ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಆಚಾರ್ಯ ವಿನೋದ್‍ಜೀ ಮುಖ್ಯ ಭಾಷಣ ಮಾಡುವರು. ವಕೀಲ ನಾರಾಯಣ ಕೆ. ವಡಕ್ಕೇವೀಡ್ ಅಧ್ಯಕ್ಷತೆ ವಹಿಸುವರು. 10ರಂದು ಸಂಜೆ 6ಕ್ಕೆ ಶ್ರೀ ಲಲಿತಾಸಹಸ್ರನಾಮಾವಳಿ, ರಾತ್ರಿ 8.30ಕ್ಕೆ ಭಂಡಾರ ಮನೆಯಿಂದ ಭಂಡಾರ ಆಗಮನ, 9.30ಕ್ಕೆ ಶ್ರೀದೇವರ ನೃತ್ಯಬಲಿ ಉತ್ಸವ, 11ರಂದು ಬೆಳಗ್ಗೆ 4.30ಕ್ಕೆ ಶ್ರೀದೇವರ ಬಲಿ ಉತ್ಸವ, ಶ್ರೀ ವಿಷ್ಣುಮೂರ್ತಿ ದೈವದ ಕುಳಿಚ್ಚಾಟ, 7ಕ್ಕೆ ಚಪ್ಪರ ಮದುವೆ, 8.30ಕ್ಕೆ ಪಿಲಿಚಾಮುಂಡಿ ದೈವದ ಕೋಲ, 10ಕ್ಕೆ ಬಬ್ಬರಿಯ ದೈವದ ಕೋಲ, 11ಕ್ಕೆ ಶ್ರೀ ದೇವರ ನೃತ್ಯ ಬಲಿ ಉತ್ಸವ, 12ಕ್ಕೆ ವಿಷ್ಣುಮೂರ್ತೀ ದೈವದ ಕೋಲ, ಸಂಜೆ 6ಕ್ಕೆ ಗುಳಿಗ ಕೋಲ ನಡೆಯುವುದು.




 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries